ಹಾವೇರಿ: ಜಿಲ್ಲೆಯ ಬ್ಯಾಡಗಿ ತಾಲ್ಲೂಕಿನ ಕಾಗಿನೆಲೆಯಲ್ಲಿ ಭಾನುವಾರ ಕುರುಬರ ಎಸ್ಟಿ ಹೋರಾಟ ಸಮಿತಿ ವತಿಯಿಂದ ರಾಜ್ಯಮಟ್ಟದ ಮಹಿಳೆಯರ ಚಿಂತನಾ ಸಭೆ ಆರಂಭವಾಯಿತು.
ಸಚಿವ ಕೆ.ಎಸ್.ಈಶ್ವರಪ್ಪ ಪಾಲ್ಗೊಂಡಿದ್ದಾರೆ. ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ, ಈಶ್ವರಾನಂದಪುರಿ ಸ್ವಾಮೀಜಿ, ಸಮುದಾಯದ ಮುಖಂಡರಾದ ಎಂ.ಟಿ.ಬಿ. ನಾಗರಾಜ್, ಎಚ್.ಎಂ.ರೇವಣ್ಣ ಸೇರಿದಂತೆ ಸಾವಿರಾರು ಮಹಿಳೆಯರು ಪಾಲ್ಗೊಂಡಿದ್ದಾರೆ.
ವೇದಿಕೆಯಲ್ಲಿ ಮಾಜಿ ಸಚಿವ ಎಚ್.ಎಂ.ರೇವಣ್ಣ ಅವರು 71ನೇ ಜನ್ಮದಿನ ಆಚರಿಸಿಕೊಂಡರು. ಅವರಿಗೆ ಕುರುಬ ಸಮುದಾಯದ ವತಿಯಿಂದ ಮೈಸೂರು ಪೇಟ ತೊಡಿಸಿ, ಬೆಳ್ಳಿಗದೆ ನೀಡಿ ಗೌರವಿಸಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.