ADVERTISEMENT

ಹಾವೇರಿ: ಹೋರಿ ತಿವಿದು ಯುವಕ ಸಾವು

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2020, 16:47 IST
Last Updated 24 ನವೆಂಬರ್ 2020, 16:47 IST
ಚಂದ್ರು ಈರಕ್ಕನವರ
ಚಂದ್ರು ಈರಕ್ಕನವರ   

ಹಾವೇರಿ: ತಾಲ್ಲೂಕಿನ ಕೆರಿಮತ್ತಿಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ‘ಹೋರಿ ಬೆದರಿಸುವ ಸ್ಪರ್ಧೆ’ಯಲ್ಲಿ ಹೋರಿ ತಿವಿದು ಯುವಕನೊಬ್ಬ ಮೃತಪಟ್ಟಿದ್ದಾನೆ.

ರಾಣೆಬೆನ್ನೂರು ತಾಲ್ಲೂಕಿನ ಅಸುಂಡಿ ಗ್ರಾಮದಚಂದ್ರು ಈರಕ್ಕನವರ (22) ಮೃತಪಟ್ಟ ಯುವಕ.

ಈತ ಆಟೊ ಚಾಲಕನಾಗಿದ್ದು, ಹೋರಿ ಬೆದರಿಸುವ ಸ್ಪರ್ಧೆ ನೋಡಲು ಹೋಗಿದ್ದ. ಸ್ಪರ್ಧೆಯನ್ನು ನೋಡುತ್ತಾ ಮೈಮರೆತಿದ್ದ ಯುವಕನಿಗೆ ಹೋರಿಯೊಂದು ತಿವಿಯಿತು. ತೀವ್ರ ರಕ್ತಸ್ರಾವದಿಂದ ಕುಸಿದುಬಿದ್ದ ಈತನನ್ನು ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಆಸ್ಪತ್ರೆ ಮುಂದೆ ಯುವಕನ ಸಂಬಂಧಿಗಳ ರೋದನ ಮುಗಿಲು ಮುಟ್ಟುವಂತಿತ್ತು.ಪೊಲೀಸರು ಸ್ಥಳಕ್ಕೆ ಧಾವಿಸಿ, ಹೋರಿ ಸ್ಪರ್ಧೆಯನ್ನು ಬಂದ್‌ ಮಾಡಿದರು. ಹಾವೇರಿ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.