ADVERTISEMENT

ಹಾವೇರಿ | ₹63 ಸಾವಿರ ಲಂಚಕ್ಕೆ ಬೇಡಿಕೆ: ಗ್ರಾಮ ಲೆಕ್ಕಾಧಿಕಾರಿ ಬಂಧನ

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2026, 19:54 IST
Last Updated 26 ಫೆಬ್ರುವರಿ 2026, 19:54 IST
<div class="paragraphs"><p>ಬಂಧನ  </p></div>

ಬಂಧನ

   

(ಪ್ರಾತಿನಿಧಿಕ ಚಿತ್ರ)

ಗುತ್ತಲ (ಹಾವೇರಿ ಜಿಲ್ಲೆ): ಸಮೀಪದ ನೆಗಳೂರ ಗ್ರಾಮದಲ್ಲಿ ಗುರುವಾರ ಲಂಚ ಪಡೆಯುತ್ತಿದ್ದ ಆರೋಪದ ಮೇಲೆ ಗ್ರಾಮದ ಲೆಕ್ಕಾಧಿಕಾರಿ ಫಕ್ಕಿರೇಶ ಬಾರ್ಕಿ ಎಂಬುವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ADVERTISEMENT

‘ಬಸಾಪುರ ಗ್ರಾಮದ ಕರಿಯಲ್ಲಪ್ಪ ಕೇಸರಳ್ಳಿ ಎಂಬುವರು ಜಮೀನು ಖಾತೆ ಬದಲಾವಣೆಗಾಗಿ ಫಕ್ಕಿರೇಶ ಬಾರ್ಕಿ ಬಳಿ ಅರ್ಜಿ ಸಲ್ಲಿಸಿದ್ದರು. ₹63 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಫಕ್ಕಿರೇಶ, ಆರಂಭದಲ್ಲಿ ₹30 ಸಾವಿರ ಲಂಚ ಪಡೆದಿದ್ದ. ಕೆಲಸ ಮಾಡದೇ ಪುನಃ ₹ 30 ಸಾವಿರ ಲಂಚಕ್ಕೆ ಬೇಡಿಕೆ ಇರಿಸಿದ್ದ. ನೊಂದ ಕರಿಯಲ್ಲಪ್ಪ ದೂರು ನೀಡಿದ್ದರು. ₹8,500 ಲಂಚ ಪಡೆಯುತ್ತಿದ್ದ ವೇಳ ಫಕ್ಕಿರೇಶನನ್ನು ಬಂಧಿಸಲಾಗಿದೆ’ ಎಂದು ಲೋಕಾಯಕ್ತ ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.