ADVERTISEMENT

‘ಕಾನೂನಿಗೆ ಸೆಡ್ಡು ಹೊಡೆಯುವವರನ್ನು ನಿಯಂತ್ರಿಸುತ್ತೇವೆ’

ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 6 ಮೇ 2022, 12:58 IST
Last Updated 6 ಮೇ 2022, 12:58 IST
ಕೋಟ ಶ್ರೀನಿವಾಸ ಪೂಜಾರಿ
ಕೋಟ ಶ್ರೀನಿವಾಸ ಪೂಜಾರಿ   

ಹಿರೇಕೆರೂರು (ಹಾವೇರಿ): ‘ಕೆಲವರು ಮತೀಯವಾದ ಇಟ್ಟುಕೊಂಡು ರಾಷ್ಟ್ರೀಯವಾದಕ್ಕೆ ಸವಾಲು ಹಾಕುತ್ತಿದ್ದಾರೆ. ಇದನ್ನು ಸ್ಪಷ್ಟವಾಗಿ ನಿಯಂತ್ರಣಕ್ಕೆ ತರುತ್ತೇವೆ. ಯಾರೂ ಕೂಡ ಕಾನೂನಿಗಿಂತ ಮೇಲಲ್ಲ’ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಪಟ್ಟಣದಲ್ಲಿ ಡಿ.ದೇವರಾಜ ಅರಸು ಮೆಟ್ರಿಕ್‌ ನಂತರ ಬಾಲಕಿಯರ ವಿದ್ಯಾರ್ಥಿ ನಿಲಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭಕ್ಕೆ ಶುಕ್ರವಾರ ಬಂದ ಸಂದರ್ಭ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಕಾನೂನಿಗೆ ಸೆಡ್ಡು ಹೊಡೆಯುವವರನ್ನು ನಿಯಂತ್ರಣ ಮಾಡುವ ಅಧಿಕಾರ ಸರ್ಕಾರಕ್ಕಿದೆ, ಅದನ್ನು ಮಾಡಿದ್ದೇವೆ ಎಂದರು.

ಕರಾವಳಿ ಭಾಗದಲ್ಲಿ ಕೆಲ ಸಂಘಟನೆಗಳಿಂದ ತಾಲಿಬಾನ್‌ ಮಾದರಿ ಸಂಸ್ಕೃತಿ ಹೇರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಅವರು ಪ್ರತಿಕ್ರಿಯಿಸಿ, ‘ಸಂವಿಧಾನ ಬದ್ಧವಾಗಿ ರಾಜ್ಯದ ಹೈಕೋರ್ಟ್‌ ಸಮವಸ್ತ್ರ ಪಾಲಿಸಿ ಎಂದು ಹೇಳಿದೆ. ಕೋರ್ಟ್‌ ಆದೇಶದಂತೆ, ಶಾಲೆಗಳಲ್ಲಿ ಸಮವಸ್ತ್ರ ಕಡ್ಡಾಯ’ ಎಂದು ಸರ್ಕಾರ ಕೂಡ ಈಗಾಗಲೇ ಆದೇಶ ಕೊಟ್ಟಿದೆ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.