ADVERTISEMENT

ಮಹಿಳೆಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನ

​ಪ್ರಜಾವಾಣಿ ವಾರ್ತೆ
Published 19 ಜೂನ್ 2021, 3:08 IST
Last Updated 19 ಜೂನ್ 2021, 3:08 IST
ಸವಣೂರ ಪಟ್ಟಣದ ಖಾದರಬಾಗ ಬಡಾವಣೆಯಲ್ಲಿ ಹಲ್ಲೆಗೆ ಒಳಗಾದ ಮಹಿಳೆ ಆಯಿಶಾ ಅವರು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ
ಸವಣೂರ ಪಟ್ಟಣದ ಖಾದರಬಾಗ ಬಡಾವಣೆಯಲ್ಲಿ ಹಲ್ಲೆಗೆ ಒಳಗಾದ ಮಹಿಳೆ ಆಯಿಶಾ ಅವರು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ   

ಸವಣೂರ: ಮಹಿಳೆಯನ್ನು ಚಾಕುವಿನಿಂದ ತಿವಿದು ಕೊಲೆಗೆ ಯತ್ನಿಸಿದ ಘಟನೆ ಸವಣೂರ ಪಟ್ಟಣದ ಖಾದರಬಾಗ ಬಡಾವಣೆಯಲ್ಲಿ ಗುರುವಾರ ಮಧ್ಯಾಹ್ನ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಗಾಯಾಳುವನ್ನು ಹರಿಹರ ಪಟ್ಟಣದ ನಿವಾಸಿ ಬಿ.ಬಿ. ಆಯಿಶಾ ಎಂದು ಗುರುತಿಸಲಾಗಿದೆ. ಆಯಿಶಾ ಅವರಿಗೆ ವಿವಾಹವಾಗಿದ್ದು, ಅವರ ಪತಿ ಮಾನಸಿಕ ಅಸ್ವಸ್ಥ ಎನ್ನಲಾಗಿದೆ.

‘ಖಾದರಬಾಗ ಬಡಾವಣೆ ನಿವಾಸಿ ದಾವಲ್‌ ಮಲ್ಲಿಕ್‌ ಎಂಬಾತ ಎಂಟು ವರ್ಷಗಳ ಹಿಂದೆ ಆಯಿಶಾ ಅವರನ್ನು ಪರಿಚಯ ಮಾಡಿಕೊಂಡು, ಮದುವೆಯಾಗುವುದಾಗಿ ನಂಬಿಸಿದ್ದಾನೆ. ನಂತರ ಮದುವೆ ಮಾಡಿಕೊಳ್ಳಬೇಕಾದರೆ ₹ 1 ಲಕ್ಷ ನೀಡಬೇಕು ಎಂದು ಬೇಡಿಕೆಯಿಟ್ಟಿದ್ದಾನೆ. ನಂತರ ಮಹಿಳೆಯಿಂದ ₹ 50 ಸಾವಿರ ಪಡೆದ ದಾವಲ್‌ ಮಲ್ಲಿಕ್‌ ತನ್ನ ಮನೆಗೆ ಕರೆದೊಯ್ದಿದ್ದಾನೆ. ಆತನ ಕುಟುಂಬಸ್ಥರು ಆಯಿಶಾ ಅವರನ್ನು ಮನೆಯೊಳಗೆ ಕರೆದುಕೊಳ್ಳದೆ, ನ್ಯಾಯ ಮಾಡಲು ಮುಂದಾಗಿದ್ದಾರೆ. ಈ ಸಂದರ್ಭದಲ್ಲಿಅಹಮದ್‌ ಬೀ ಎಂಬಾತ ಆಯಿಶಾ ಅವರ ಕುತ್ತಿಗೆಗೆ ಚಾಕುವಿನಿಂದ ತಿವಿದು ಕೊಲೆಗೆ ಯತ್ನಿಸಿದ್ದಾನೆ’ ಎಂದು ದೂರಿನಲ್ಲಿ ತಿಳಿಸಲಾಗಿದೆ.

ADVERTISEMENT

ಸವಣೂರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿ ದಾವಲ್‌ ಮಲ್ಲಿಕ್‌ನನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.