ADVERTISEMENT

ಜಿ.ಪಂ. ಅಧ್ಯಕ್ಷ ಬಸನಗೌಡ ನಿಧನ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2020, 2:23 IST
Last Updated 20 ಸೆಪ್ಟೆಂಬರ್ 2020, 2:23 IST
ಬಸನಗೌಡ ದೇಸಾಯಿ
ಬಸನಗೌಡ ದೇಸಾಯಿ   

ಶಿಗ್ಗಾವಿ: ಹಾವೇರಿ ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಬಸನಗೌಡ ಹನುಮಂತಗೌಡ ದೇಸಾಯಿ (52) ಶನಿವಾರ ನಿಧನರಾದರು.

ಅವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಅವರ ಅಂತ್ಯ ಸಂಸ್ಕಾರ ಭಾನುವಾರ ಮಧ್ಯಾಹ್ನ 12ಗಂಟೆಗೆ ಹುಬ್ಬಳ್ಳಿ ಲಿಂಗರಾಜ ನಗರದಲ್ಲಿ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

ಮೂಲತಃ ಅವರು ಧಾರವಾಡ ಜಿಲ್ಲೆಯ ನವಲಗುಂದ ತಾಲ್ಲೂಕಿನ ಗುಡಿಸಾಗರ ಗ್ರಾಮದವರು. ಶಿಗ್ಗಾವಿ ತಾಲ್ಲೂಕಿನ ಧುಂಡಸಿ ಜಿ.ಪಂ ಕ್ಷೇತ್ರದಿಂದ ಆಯ್ಕೆಯಾಗಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿದ್ದರು. ಅರಟಾಳ ಜೈನ್ ದೇವಸ್ಥಾನ ಸಮಿತಿಯ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.

ADVERTISEMENT

ಕೋವಿಡ್‌ನಿಂದ ಗುಣಮುಖರಾದ ನಂತರ ಮೂತ್ರಪಿಂಡ, ಯಕೃತ್ತು ಸಮಸ್ಯೆಗೆ ತುತ್ತಾಗಿದ್ದರು. ಭಾನುವಾರ ಬೆಳಿಗ್ಗೆ 7 ಗಂಟೆಗೆ ಶಿಗ್ಗಾವಿ ಪ್ರವಾಸಿ ಮಂದಿರದ ಮುಂದೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.