ಬೆಂಗಳೂರು: ಅಪರಾಧ ಪ್ರಕರಣಗಳ ತನಿಖೆಯ ವಿಳಂಬವನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್, ಪೊಲೀಸರು ಮತ್ತು ತನಿಖಾ ಸಂಸ್ಥೆಗಳಿಗೆ ಇಂತಿಷ್ಟೇ ಅವಧಿಯಲ್ಲಿ ತನಿಖೆ ಪೂರ್ಣಗೊಳಿಸಬೇಕೆಂಬ ಗಡುವು ನಿಗದಿಪಡಿಸಿದೆ.
ಸಣ್ಣ ಪುಟ್ಟ ಅಪರಾಧಗಳು ಮತ್ತು ಗಂಭೀರ ಅಪರಾಧಗಳ ತನಿಖೆ ಪೂರ್ಣಗೊಳಿಸಲು ಕ್ರಮವಾಗಿ 60 ಮತ್ತು 90 ದಿನಗಳ ಕಾಲಾವಕಾಶ ನಿಗದಿಪಡಿಸಿದೆ.
ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯಕುಮಾರ್ ಪಾಟೀಲ್ ವಿರುದ್ಧ 2012ರಲ್ಲಿ ಸಲ್ಲಿಸಲಾಗಿದ್ದ ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣದಲ್ಲಿ ತನಿಖೆ ವಿಳಂಬವಾಗುತ್ತಿದೆ ಎಂದು ದೂರುದಾರ ಸುಜಿತ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದನ್ಯಾಯಮೂರ್ತಿ ಎಸ್. ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಮಹತ್ವದ ಮಧ್ಯಂತರ ಆದೇಶ ನೀಡಿದ್ದು, ತ್ವರಿತ ತನಿಖೆಗೆ ವಿಸ್ತೃತ ಮಾರ್ಗಸೂಚಿ ರೂಪಿಸಿ ಪೊಲೀಸರಿಗೆ ಹಲವು ನಿರ್ದೇಶನ
ಗಳನ್ನು ನೀಡಿದೆ.
ತನಿಖೆ ಪೂರ್ಣಗೊಳಿಸಲು ಸಮಯ ವಿಸ್ತರಣೆಗೆ ಸೂಕ್ತ ಕಾರಣ ಪಡೆದು ವಿಚಾರಣಾ ಕೋರ್ಟ್ಗಳು ಪೊಲೀಸರ ಕೋರಿಕೆಯ ಮೇರೆಗೆ ತನಿಖೆಯ ಅವಧಿಯನ್ನು ವಿಸ್ತರಣೆ ಮಾಡಬಹುದು ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.