ADVERTISEMENT

ಖರ್ಗೆ ಚುನಾವಣೆ ಕಣಕ್ಕೆ ಇಂದು

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2014, 8:00 IST
Last Updated 20 ಮಾರ್ಚ್ 2014, 8:00 IST

ಗುಲ್ಬರ್ಗ: ಸಚಿವ ಮಲ್ಲಿಕಾರ್ಜುನ ಖರ್ಗೆ ಅವರು ಗುಲ್ಬರ್ಗ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗುರುವಾರ ಮಧ್ಯಾಹ್ನ 12.30 ನಾಮಪತ್ರ ಸಲ್ಲಿಸಲಿದ್ದಾರೆ.

ಗುರುವಾರ ಬೆಳಿಗ್ಗೆ 10.30 ನಗರದ ಜಗತ್‌ ವೃತ್ತದಲ್ಲಿರುವ ಬಸವೇಶ್ವರ, ಅಂಬೇಡ್ಕರ್‌ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡುವರು.

ಬಳಿಕ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವರು. ಈ ಸಂದರ್ಭದಲ್ಲಿ ಸಚಿವ ಖಮರುಲ್‌ ಇಸ್ಲಾಂ, ಶರಣ ಪ್ರಕಾಶ ಪಾಟೀಲ, ಬಾಬುರಾವ ಚಿಂಚನಸೂರ ಹಾಗೂ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಬಾಬನಗೌಡ ಸಂಕನೂರ ಹಾಗೂ ಲೋಕಸಭಾ ಕ್ಷೇತ್ರ ವ್ಯಾಪ್ತಿಗೊಳಪಟ್ಟ ಎಲ್ಲ ಶಾಸಕರು, ಜನಪ್ರತಿನಿಧಿಗಳು ಇರುವರು. ಬಳಿಕ ಚುನಾವಣಾಧಿಕಾರಿ ಕಚೇರಿಗೆ ಬಂದು ನಾಮಪತ್ರ ಸಲ್ಲಿಸುವರು ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭೀಮರೆಡ್ಡಿ ಪಾಟೀಲ ಕುರಕುಂದಾ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.