ADVERTISEMENT

ಬಿಜೆಪಿ ಪರಿವರ್ತನಾ ಯಾತ್ರೆ ಜಿಲ್ಲೆ ಪ್ರವೇಶ ಇಂದು

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2017, 5:30 IST
Last Updated 3 ಡಿಸೆಂಬರ್ 2017, 5:30 IST
ಬಿಜೆಪಿ ಪರಿವರ್ತನಾ ಯಾತ್ರೆ ಜಿಲ್ಲೆ ಪ್ರವೇಶ ಇಂದು
ಬಿಜೆಪಿ ಪರಿವರ್ತನಾ ಯಾತ್ರೆ ಜಿಲ್ಲೆ ಪ್ರವೇಶ ಇಂದು   

ಕಲಬುರ್ಗಿ: ನವ ಕರ್ನಾಟಕ ನಿರ್ಮಾಣಕ್ಕಾಗಿ ಬಿಜೆಪಿ ಹಮ್ಮಿಕೊಂಡಿರುವ 'ಪರಿವರ್ತನಾ ಯಾತ್ರೆ'ಯು ಅಫಜಲಪುರ ಮೂಲಕ ಭಾನುವಾರ ಜಿಲ್ಲೆ ಪ್ರವೇಶಿಸಲಿದೆ.

ಮಧ್ಯಾಹ್ನ 3 ಗಂಟೆಗೆ ಅಫಜಲಪುರದ ಮಹಾಂತೇಶ್ವರ ವಿದ್ಯಾವರ್ಧಕ ಸಂಘದ ಶಾಲಾ ಆವರಣದಲ್ಲಿ ಹಾಗೂ ಸಂಜೆ 6 ಗಂಟೆಗೆ ಆಳಂದ ಪಟ್ಟಣದ ಶ್ರೀರಾಮ ಮಾರುಕಟ್ಟೆ ಮೈದಾನದಲ್ಲಿ 'ಪರಿವರ್ತನಾ ಯಾತ್ರೆ' ಜರುಗಲಿದೆ.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವರು ಹಾಗೂ ರಾಜ್ಯದ ಪ್ರಮುಖ ನಾಯಕರು ಭಾಗವಹಿಸುವರು.
ಡಿ.4ರಂದು ಬೆಳಿಗ್ಗೆ 11 ಗಂಟೆಗೆ ಕಲಬುರ್ಗಿ ತಾಲ್ಲೂಕಿನ ಕಮಲಾಪುರದಲ್ಲಿ ಬಹಿರಂಗ ಸಮಾವೇಶ ಜರುಗಲಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.