ADVERTISEMENT

ರೈತರ ಸಾಲ ಸಂಪೂರ್ಣ ಮನ್ನಾ: ರಾಜನಾಥ್ ಭರವಸೆ

​ಪ್ರಜಾವಾಣಿ ವಾರ್ತೆ
Published 6 ಮೇ 2018, 11:15 IST
Last Updated 6 ಮೇ 2018, 11:15 IST
ಚಿತ್ತಾಪುರ ಪಟ್ಟಣದಲ್ಲಿ ಶನಿವಾರ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಬಿಜೆಪಿ ಅಭ್ಯರ್ಥಿ ವಾಲ್ಮೀಕ ನಾಯಕ ಪರವಾಗಿ ರೋಡ್ ಶೋ ನಡೆಸಿ ಮತಯಾಚನೆ ಮಾಡಿ ಮಾತನಾಡಿದರು.
ಚಿತ್ತಾಪುರ ಪಟ್ಟಣದಲ್ಲಿ ಶನಿವಾರ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಬಿಜೆಪಿ ಅಭ್ಯರ್ಥಿ ವಾಲ್ಮೀಕ ನಾಯಕ ಪರವಾಗಿ ರೋಡ್ ಶೋ ನಡೆಸಿ ಮತಯಾಚನೆ ಮಾಡಿ ಮಾತನಾಡಿದರು.   

ಚಿತ್ತಾಪುರ: ‘ರಾಜ್ಯದಲ್ಲಿ ಮತ್ತೊಮ್ಮೆ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗದಂತೆ ತಡೆಯಲು ಸಿದ್ದರಾಮಯ್ಯ ಇನ್ನಿಲ್ಲದ ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ಅವರ ಪ್ರಯತ್ನ ಫಲಿಸುವುದಿಲ್ಲ’ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದರು.

ಪಟ್ಟಣದಲ್ಲಿ ಶನಿವಾರ ಬಿಜೆಪಿ ಅಭ್ಯರ್ಥಿ ವಾಲ್ಮೀಕ ನಾಯಕ ಪರವಾಗಿ ರೋಡ್ ಶೋ ನಡೆಸಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರೈತರ ₹ 10 ಸಾವಿರ ಸಾಲ ಮನ್ನಾ ಮಾಡಿದೆ. ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಹತ್ತು ದಿನಗಳಲ್ಲಿ ರೈತರ ಸಂಪೂರ್ಣ ಸಾಲ ಮನ್ನಾ ಮಾಡಲಾಗಿದೆ. ಪ್ರಸ್ತುತ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ರೈತರ ₹ 1 ಲಕ್ಷ ಸಾಲ ಮನ್ನಾ ಮಾಡುತ್ತೇವೆ’ ಎಂದು ಭರವಸೆ ನೀಡಿದರು.

ಅಭ್ಯರ್ಥಿ ವಾಲ್ಮೀಕ ನಾಯಕ,  ಮುಖಂಡರಾದ ಮಲ್ಲಿಕಾರ್ಜುನ ಎಮ್ಮೆನೋರ್, ರಘುನಾಥ ಮಲ್ಕಾಪುರೆ, ವಿಶ್ವನಾಥ ಪಾಟೀಲ್ ಹೆಬ್ಬಾಳ, ಪಾಟೀಲ್ ಅಲ್ಲೂರ , ಲಿಂಗಾರೆಡ್ಡಿ ಭಾಸರೆಡ್ಡಿ, ಶಿವಲಿಂಗಪ್ಪ ವಾಡೆದ್, ಅರವಿಂದ ಚವಾಣ್, ಬಿಜೆಪಿ ರಾಜ್ಯ ಮಹಿಳಾ ಮೊರ್ಚಾ ಉಪಾಧ್ಯಕ್ಷೆ ಶಶಿಕಲಾ ತೆಂಗಳಿ, ರವೀಂದ್ರ ಸಜ್ಜನಶೆಟ್ಟಿ, ತಮ್ಮಣ್ಣ ಡಿಗ್ಗಿ, ನೀಲಕಂಠರಾವ ಪಾಟೀಲ್, ಬಸವರಾಜ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.