ADVERTISEMENT

ರೌಡಿ ಶೀಟರ್‌ಗಳ ಮೇಲೆ ಗುಂಡಿನ ದಾಳಿ

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2017, 7:04 IST
Last Updated 8 ಅಕ್ಟೋಬರ್ 2017, 7:04 IST
ರೌಡಿ ಶೀಟರ್‌ಗಳ ಮೇಲೆ ಗುಂಡಿನ ದಾಳಿ
ರೌಡಿ ಶೀಟರ್‌ಗಳ ಮೇಲೆ ಗುಂಡಿನ ದಾಳಿ   

ಕಲಬುರ್ಗಿ: ರೌಡಿ ಶೀಟರ್‌ಗಳಾದ ಶಿವಕುಮಾರ್ ಮತ್ತು ಚೇತನ್‌ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.

ಇಬ್ಬರಿಗೂ ಇಲ್ಲಿನ ಯುನೈಟೆಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇವರಿಬ್ಬರನ್ನೂ ಬಂಧಿಸಲು ತೆರಳಿದ್ದ ಆರ್‌.ಜಿ. ನಗರ ಠಾಣೆ ಪಿಎಸ್‌ಐ ಅಕ್ಕಮಹಾದೇವಿ ಹಾಗೂ ಅಶೋಕನಗರ ಠಾಣೆ ಇನ್‌ಸ್ಪೆಕ್ಟರ್ ಜೇಮ್ಸ್ ಮಿನೇಜಸ್ ಅವರಿಗೆ ಗಾಯಗಳಾಗಿವೆ. ಅವರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅ.2ರಂದು ಶಿವಕುಮಾರ್ ಹಾಗೂ ಚೇತನ್ ಅವರು ಪ್ರವೀಣ ಮತ್ತು ವಿನಾಯಕ್ ಎಂಬುವರನ್ನು ಬೆದರಿಸಿ ಹಣ, ಚಿನ್ನಾಭರಣ ದರೋಡೆ ಮಾಡಿ ಪರಾರಿಯಾಗಿದ್ದರು. ಖಚಿತ ಮಾಹಿತಿ ಆಧರಿಸಿ ಇಲ್ಲಿನ ಆಳಂದ ರಸ್ತೆಯ ಡಬರಾಬಾದ್ ಬಳಿ ಅವರಿಬ್ಬರನ್ನು ಬಂಧಿಸಲು ಪೊಲೀಸರು ತೆರಳಿದ್ದರು. ಈ ವೇಳೆ ಆರೋಪಿಗಳು ಮಾರಕಾಸ್ತ್ರಗಳಿಂದ ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ. ಪೊಲೀಸರು ರಕ್ಷಣೆಗಾಗಿ ಆರೋಪಿಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ADVERTISEMENT

ಈಶಾನ್ಯ ವಲಯ ಐಜಿಪಿ ಅಲೋಕ್‌ ಕುಮಾರ್‌, ಎಸ್ಪಿ ಎನ್. ಶಶಿಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.