ADVERTISEMENT

ಸಾಮಾಜಿಕ ನ್ಯಾಯವೇ ಧ್ಯೇಯ: ಎಂ.ವೈ.ಪಾಟೀಲ

​ಪ್ರಜಾವಾಣಿ ವಾರ್ತೆ
Published 11 ಮೇ 2018, 6:26 IST
Last Updated 11 ಮೇ 2018, 6:26 IST

ಅಫಜಲಪುರ: ‘ತಾಲ್ಲೂಕಿನಲ್ಲಿ ಬದಲಾವಣೆ ಗಾಳಿ ಬೀಸುತ್ತಿದ್ದೆ. ಎಲ್ಲಾ ಸಮಾಜದವರು ನನ್ನ ಗೆಲುವಿಗೆ ಟೊಂಕ ಕಟ್ಟಿ ನಿಲ್ಲುತ್ತಿದ್ದಾರೆ‘ ಎಂದು ಕಾಂಗ್ರೆಸ್ ಅಭ್ಯರ್ಥಿ ಎಂ.ವೈ.ಪಾಟೀಲ ವಿಶ್ವಾಸ ವ್ಯಕ್ತಪಡಿಸಿದರು.

ಪಟ್ಟಣದಲ್ಲಿ ಗುರುವಾರ ಬೈಕ ರ‍್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ‘ನಾನು ಸಾಮಾಜಿಕ ನ್ಯಾಯದ ಮೇಲೆ ನಂಬಿಕೆ ಇಟ್ಟವನು ಮತ್ತು ಅದರಂತೆ ಮಾಡಿ ತೋರಿಸಿದ್ದೇನೆ. ಪ್ರತಿಯೊಂದು ಸಮಾಜದವರಿಗೂ ರಾಜಕೀಯ ಸ್ಥಾನಮಾನ ನೀಡಿದ್ದೇನೆ. 2 ಬಾರಿ ಶಾಸಕನಾಗಿ ಕೆಲಸ ಮಾಡಿದ್ದೇನೆ. ಮುಂದೆಯೂ ಸಹ ತಮ್ಮ ಆಶೀರ್ವಾದದಿಂದ ಶಾಸಕನಾಗಿ ಅಫಜಲಪುರ ಮತಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಮಾಡುತ್ತೇನೆ’ ಎಂದರು.‌

ಮುಖಂಡರಾದ ಶಿವಪುತ್ರಪ್ಪ ಸಂಗೋಳಗಿ, ಮತೀನ ಪಟೇಲ, ಚಂದ್ರ ಶೇಖರ ಕರಜಗಿ, ಪಪ್ಪು ಪಟೇಲ,
ಸಂಜೀವ ನಿಂಬಾಳ, ಸಿದ್ದ ರಾಮಪ್ಪ ಗಣಾಚಾರಿ, ಜಿ.ಪಂ ಸದಸ್ಯ ಅರುಣಕುಮಾರ ಎಂ. ಪಾಟೀಲ, ಸಿದ್ಧಾರ್ಥ ಬಸರಗಿಡದ, ಪ್ರಕಾಶ ಜಮಾದಾರ, ಮಹಾದೇವ ಕಲಕೇರಿ, ಬಿಲ್ಲಂರಾಜಾ ಮ್ಯಾಳೇಸಿ ಇತರರು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.