ADVERTISEMENT

‘15ರಂದು ಯುವ ಶಕ್ತಿ ಸಮಾವೇಶ’

ಮಾಜಿ ಸಚಿವೆ ಪುರಂದರೇಶ್ವರಿ ಭಾಗಿ

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2018, 7:37 IST
Last Updated 10 ಮಾರ್ಚ್ 2018, 7:37 IST

ಅಫಜಲಪುರ: ‘ಪಟ್ಟಣದ ನ್ಯಾಷನಲ್‌ ಫಂಕ್ಷನ್‌ ಮೈದಾನದಲ್ಲಿ ಮಾ.15ರಂದು ಯುವಶಕ್ತಿ ಸಮಾವೇಶ ಏರ್ಪಡಿಸಲಾಗಿದ್ದು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪುರಂದರೇಶ್ವರಿ ಭಾಗವಹಿಸಲಿದ್ದಾರೆ’ ಎಂದು ಮಾಜಿ ಶಾಸಕ ಎಂ.ವೈ.ಪಾಟೀಲ ತಿಳಿಸಿದರು.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬೃಹತ್ ಸಮಾವೇಶ ನಡೆಯಲಿದ್ದು, ಯುವಕರು, ಬಿಜೆಪಿ ಶಕ್ತಿ ಕೇಂದ್ರದ ಪದಾಧಿಕಾರಿಗಳು, ಎಲ್ಲಾ ಮೋರ್ಚಾ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ’ ಎಂದರು.

ಬಿಜೆಪಿ ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಶರಣು ಕುಂಬಾರ ಹಾಗೂ ಮತೀನ್ ಪಟೇಲ್‌, ಶಿವಾನಂದ ಗಾಡಿಸಾಹುಕಾರ, ಮಲ್ಲಿಕಾರ್ಜುನ ನಿಂಗದಳ್ಳಿ, ಸಿದ್ಧಾರ್ಥ ಬಸರಿಗಿಡದ, ವಿಠ್ಠಲ ನಾಟೀಕಾರ, ಶ್ರೀಶೈಲ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.