ಕಲಬುರ್ಗಿ: ಮಹಾರಾಷ್ಟ್ರ–ಕರ್ನಾಟಕ ಗಡಿ ಇರುವ ಜಿಲ್ಲೆಯ ಆಳಂದ ತಾಲ್ಲೂಕಿನ ಹಿರೊಳ್ಳಿಯ ಚೆಕ್ಪೋಸ್ಟ್ನಲ್ಲಿ ಕರ್ತವ್ಯಕ್ಕೆ ಹಾಜರಾಗದೇ ಕರ್ತವ್ಯ ಲೋಪ ಎಸಗಿದ ಇಬ್ಬರು ಅಧಿಕಾರಿಗಳನ್ನು ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಅಮಾನತು ಮಾಡಿದ್ದಾರೆ.
ಮಹಾರಾಷ್ಟ್ರದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದುದರಿಂದ ಅಲ್ಲಿಂದ ಜಿಲ್ಲೆಗೆ ಬರುವವರ ಕೋವಿಡ್ ದಾಖಲೆಗಳನ್ನು ಪರಿಶೀಲಿಸಲು ಗ್ರಾಮ ಲೆಕ್ಕಾಧಿಕಾರಿ ರವೀಂದ್ರ ಮತ್ತು ಹಿರಿಯ ಆರೋಗ್ಯ ಸಹಾಯಕ ರೇವಣಸಿದ್ದ ಅವರನ್ನು ನಿಯೋಜಿಸಲಾಗಿತ್ತು. ಆದರೆ ಚೆಕ್ಪೋಸ್ಟ್ಗೆ ಹೋಗದೇ ನಿರ್ಲಕ್ಷ್ಯ ತೋರಿದ್ದಕ್ಕಾಗಿ ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ಜೋತ್ಸ್ನಾ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.