ADVERTISEMENT

750 ಮೀಟರ್ ಉದ್ದ ತ್ರಿವರ್ಣ ಜಾಥಾ

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2022, 17:00 IST
Last Updated 15 ಆಗಸ್ಟ್ 2022, 17:00 IST
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ನಾಲ್ಕು ಚಕ್ರ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕಲಬುರಗಿ ನಗರದಲ್ಲಿ ನಡೆದ 750 ಮೀಟರ್ ಉದ್ದದ ತಿರಂಗಾ ಮೆರವಣಿಗೆ
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ನಾಲ್ಕು ಚಕ್ರ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕಲಬುರಗಿ ನಗರದಲ್ಲಿ ನಡೆದ 750 ಮೀಟರ್ ಉದ್ದದ ತಿರಂಗಾ ಮೆರವಣಿಗೆ   

ಕಲಬುರಗಿ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಸೋಮವಾರ ನಾಲ್ಕುಚಕ್ರ ಚಾರಿಟೆಬಲ್ ಟ್ರಸ್ಟ್ ವತಿಯಿಂದ 750 ಮೀಟರ್ ಉದ್ದದ ತಿರಂಗಾ ಮೆರವಣಿಗೆ ನಡೆಯಿತು.

ಶರಣಬಸವೇಶ್ವರ ಸಂಸ್ಥಾನದ ಆವರಣದಲ್ಲಿ ಮೆರವಣಿಗೆಗೆ ಚಾಲನೆ ನೀಡಿದ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರ್‌ಪರ್ಸನ್ ಡಾ.ದಾಕ್ಷಾಯಿಣಿ ಎಸ್‌ ಅಪ್ಪ ಮಾತನಾಡಿ, ‘ಯುವಪೀಳಿಗೆಯಲ್ಲಿ ರಾಷ್ಟ್ರಾಭಿಮಾನ ಮೂಡಿಸುವಂತಹ ಇಂತಹ ಮೆರವಣಿಗೆ ನಡೆಸುತ್ತಿರುವುದು ಸಂತಸದ ವಿಷಯ. ಇಂತಹ ಕಾರ್ಯಗಳು ಆಗಾಗ ನಡೆಯಬೇಕು’ ಎಂದರು.

ಸೈನಿಕ ವಿಠಲ್ ವಾಡೆ ಮಾತನಾಡಿ, ‘ದೇಶಕ್ಕಾಗಿ ಬಲಿದಾನ ಮಾಡಿದ ಸ್ವಾತಂತ್ರ್ಯ ವೀರರಿಗೆ ಸ್ಮರಿಸುತ್ತಿರುವುದು ಖುಷಿಯ ವಿಚಾರ’ ಎಂದರು.

ADVERTISEMENT

ಮೆರವಣಿಗೆಯು ಎಸ್‌ವಿಪಿ ವೃತ್ತ ಹಾಯ್ದು ಜಗತ್ ಸರ್ಕಲ್ ಮಖಾಂತರಮತ್ತೆದೇವಸ್ಥಾನತಲುಪಿತು. ಮಾಶಾಳದ ಸಿದ್ಧಲಿಂಗೇಶ್ವರ ಸಂಸ್ಥಾನದ ಕೇದಾರ ಸ್ವಾಮೀಜಿ, ಡಾ. ಅಪ್ಪಾರಾವ ದೇವಿ ಮಹಾರಾಜ, ಡಾ.ರೇವಣಸಿದ್ದ ಶಿವಾಚಾರ್ಯರು, ಮಹೇಶ್ವರಾನಂದ ಗುರೂಜಿ, ವಿಜಯಮಹಾಂತ ಅಪ್ಪ, ಏಕಡಂಡಿಗಿ ಮಠದ ಸ್ವಾಮೀಜಿ, ಡಾ. ಅಲೋಕ ಪಾಟೀಲ, ಟ್ರಸ್ಟ್‌ನ ಮಾಲಾಕಣ್ಣಿ, ಮಾಲಾ ದಣ್ಣುರ, ಕಲ್ಯಾಣರಾವ ಪಾಟೀಲ, ಮಹೇಶಚಂದ್ರ ಪಾಟೀಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.