ವಾಡಿ: ಹಾವು ಕಡಿತದಿಂದ ಬಾಲಕಿ ಮೃತಪಟ್ಟ ಘಟನೆ ಪಟ್ಟಣದಲ್ಲಿ ಗುರುವಾರ ನಡೆದಿದೆ. ವಾರ್ಡ್ ಸಂಖ್ಯೆ 20ರ ನಂದಿನಿ ಈಶ್ವರ ಜಾಧವ(3) ಮೃತ ಬಾಲಕಿ.
ಮನೆ ಪಕ್ಕದ ಅಂಗಡಿಗೆ ಸಂಜೆ 6ರ ಸುಮಾರಿಗೆ ಬಾಲಕಿ ಹೋದಾಗ ವಿಷಪೂರಿತ ಹಾವು ಕಚ್ಚಿದೆ. ತಕ್ಷಣವೇ ಬಾಲಕಿಯನ್ನು ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದೆ. ಚಿಂತಾ ಜನಕ ಸ್ಥಿತಿ ತಲುಪಿದ ಬಾಲಕಿಗೆ ಆಕ್ಸಿಜನ್ ಪೂರೈಕೆ ಮಾಡುವಾಗ ವಿದ್ಯುತ್ ಕಡಿತಗೊಂಡಿದೆ. ನಂತರ ಬಾಲಕಿಯನ್ನು ಕಲಬುರ್ಗಿಯ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ
ಮೃತಪಟ್ಟಿದ್ದಾಳೆ.
‘ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದ ಕಾರಣ ಸಕಾಲಕ್ಕೆ ಚಿಕಿತ್ಸೆ ಸಿಕ್ಕಿಲ್ಲ. ವಿದ್ಯುತ್ ಕಡಿತದ ಸಂದರ್ಭದಲ್ಲಿ ಪರ್ಯಾಯ ವ್ಯವಸ್ಥೆ ಇಲ್ಲದಿರುವುದು ಮಗುವಿನ ಸಾವಿಗೆ ಕಾರಣ’ ಎಂದು ಪೋಷಕರು ಆರೋಪಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.