ADVERTISEMENT

ಹಳ್ಳದಲ್ಲಿ ಕೊಚ್ಚಿ ಹೋದ ಮಹಿಳೆ ಸಾವು

​ಪ್ರಜಾವಾಣಿ ವಾರ್ತೆ
Published 31 ಜುಲೈ 2022, 16:29 IST
Last Updated 31 ಜುಲೈ 2022, 16:29 IST
ಶ್ರೀದೇವಿ ಪೂಜಾರಿ
ಶ್ರೀದೇವಿ ಪೂಜಾರಿ   

ಕಲಬುರಗಿ: ಜಿಲ್ಲೆಯ ಆಳಂದ ತಾಲ್ಲೂಕಿನ ತೀರ್ಥ ಗ್ರಾಮದ ಹಳ್ಳದಲ್ಲಿ ಕೊಚ್ಚಿಕೊಂಡು ಹೋಗಿದ್ದ ಮಹಿಳೆಯೊಬ್ಬರು ಶವವಾಗಿ ಪತ್ತೆಯಾಗಿದ್ದಾರೆ.

ತೀರ್ಥ ಗ್ರಾಮದ ರೈತ ಮಹಿಳೆ ಶ್ರೀದೇವಿ ನಿಂಗಣ್ಣಾ ಪೂಜಾರಿ (45) ಮೃತಪಟ್ಟ ಮಹಿಳೆ. ಜಮೀನಿನಲ್ಲಿ ಕೆಲಸ ಮುಗಿಸಿಕೊಂಡು ಎತ್ತುಗಳ ಸಮೇತ ಮನೆಗೆ ತೆರಳುವಾಗ ಹಳ್ಳದ ನೀರಿನ ರಭಸ ಲೆಕ್ಕಿಸದೇ ಹಳ್ಳ ದಾಟಲು ಯತ್ನಿಸಿದರು. ಆದರೆ, ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಕೊಚ್ಚಿಕೊಂಡು ಹೋದರು.

ರಾತ್ರಿ ಇಡೀ ಕುಟುಂಬ ಸದಸ್ಯರು ಮಹಿಳೆಗಾಗಿ ಹುಡುಕಾಟ ನಡೆಸಿದರು. ಭಾನುವಾರ ಬೆಳಿಗ್ಗೆ ಹೆಬಳ್ಳಿ ಗ್ರಾಮದ ಸಮೀಪದ ಹಳ್ಳದ ದಂಡೆಯಲ್ಲಿ ಮಹಿಳೆ ಶವ ಪತ್ತೆಯಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.