ADVERTISEMENT

ಅಫಜಲಪುರ | ಬೈಕ್‌‌ಗೆ ಲಾರಿ ಡಿಕ್ಕಿ: ಸ್ಥಳದಲ್ಲೇ ಮೂವರು ಬೈಕ್ ಸವಾರರ ದುರ್ಮರಣ

​ಪ್ರಜಾವಾಣಿ ವಾರ್ತೆ
Published 30 ಜನವರಿ 2020, 9:48 IST
Last Updated 30 ಜನವರಿ 2020, 9:48 IST
   

ಕಲಬುರ್ಗಿ: ಜಿಲ್ಲೆಯ ಅಫಜಲಪುರ ತಾಲ್ಲೂಕಿನ ರೇವೂರ ಗ್ರಾಮದ ಬಳಿ ಲಾರಿ-ಬೈಕ್ ಮಧ್ಯೆ ಸಂಭವಿಸಿದ ಡಿಕ್ಕಿಯಲ್ಲಿ ಮೂವರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ರಾಜಕುಮಾರ್ ಖಂಡೇಕರ್ (24), ಗುಂಡಪ್ಪಾ ಮಾನೆ (20), ಮಹಾದೇವಪ್ಪಾ ಸಾಲೆಗಾಂವ್ (30) ಮೃತರು‌.

ಜಾತ್ರಾ‌ ಮಹೋತ್ಸವದಲ್ಲಿ ಪಾಲ್ಗೊಂಡು ಒಂದೇ ಬೈಕ್‌ನಲ್ಲಿ ಮೂವರೂ ತೆರಳುತ್ತಿದ್ದರು. ಸ್ವಗ್ರಾಮ ಆಳಂದ ತಾಲೂಕಿನ ಮಾಡಿಯಾಳ ಗ್ರಾಮಕ್ಕೆ ತೆರಳುತ್ತಿದ್ದರು. ರೇವೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.