ಕಲಬುರಗಿ: ನಗರದ ಹೊರವಲಯದ ಆಳಂದ ರಸ್ತೆಯಲ್ಲಿರುವ ಪಟ್ಟಣ ಕ್ರಾಸ್ ಬಳಿ ಮಂಗಳವಾರ ರಾತ್ರಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಮತ್ತು ಸರಕುಸಾಗಣೆ ಮಿನಿ ವಾಹನ (ಪಿಕ್ ಅಪ್) ನಡುವೆ ಡಿಕ್ಕಿ ಸಂಭವಿಸಿ, ಪಟ್ಟಣ ಗ್ರಾಮದ ಮಲ್ಲಯ್ಯ ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನಿಬ್ಬರು ಗಾಯಗೊಂಡಿದ್ದಾರೆ.
ಬಸ್ ಆಳಂದದಿಂದ ಕಲಬುರಗಿಗೆ ಬರುತ್ತಿದ್ದರೆ, ವಾಹನವು ಪಟ್ಟಣ ಕಡೆಗೆ ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಸಂಚಾರ ಠಾಣೆ–2ರ ಪೊಲೀಸ್ ಇನ್ಸ್ಪೆಕ್ಟರ್ ಅಮರೇಶ ಹಾಗೂ ಸಿಬ್ಬಂದಿ ಭೇಟಿ ನೀಡಿ, ಪರಿಶೀಲಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.