ಅಫಜಲಪುರ: ತಾಲ್ಲೂಕಿನ ಚೌಡಾಪುರ ಗ್ರಾಮದ ಚಿನ್ಮಯಗಿರಿ ಮಹಾಂತೇಶ್ವರ ಮಠದ ಹತ್ತಿರದ ರಸ್ತೆಯ ಮೇಲೆ ಶುಕ್ರವಾರ ರಾತ್ರಿ 8ರ ಸುಮಾರು ಟ್ರ್ಯಾಕ್ಟರ್ ಹಾಯ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಗೊಬ್ಬರವಾಡಿ ಗ್ರಾಮದ ವಾಸಿಂ ಸುತಾರ್ (43) ಮೃತಪಟ್ಟವರು. ಟ್ರ್ಯಾಕ್ಟರ್ ಮತ್ತು ಬೈಕ್ ಎರಡೂ ವಾಹನಗಳು ಚೌಡಾಪುರದಿಂದ ಚಿನಮಗೇರಿ ಗ್ರಾಮಕ್ಕೆ ಹೊರಟಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ. ದೇವಲಗಾಣಗಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪಿಎಸ್ಐ ಭೀಮರತ್ನ ಸಜ್ಜನ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.