ADVERTISEMENT

ಅಫಜಲಪುರ ಎಪಿಎಂಸಿಯಿಂದ ಸಿಎಂ ಪರಿಹಾರ ನಿಧಿಗೆ ₹ 5 ಲಕ್ಷ

​ಪ್ರಜಾವಾಣಿ ವಾರ್ತೆ
Published 30 ಮೇ 2020, 10:03 IST
Last Updated 30 ಮೇ 2020, 10:03 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಅಫಜಲಪುರ: ತಾಲ್ಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯು ಶುಕ್ರವಾರ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಪರಿಹಾರ ನಿಧಿಗೆ ₹ 5 ಲಕ್ಷದ ಚೆಕ್‌ ನೀಡಿತು.

ಈ ಸಂದರ್ಭದಲ್ಲಿ ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ ಮಾತನಾಡಿ,‘ಕೊರೊನಾ ಸೋಂಕು ಹರಡುವಿಕೆ ತಡೆಗಟ್ಟಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಶ್ರಮಿಸುತ್ತಿದೆ. ಈ ಕಾರ್ಯಕ್ಕೆ ಬೆಂಬಲಿಸಲು ಪೂರಕವಾಗಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಿಂದ ₹ 5 ಲಕ್ಷ ಚೆಕ್ ನೀಡಲಾಗಿದೆ’ ಎಂದರು.

ಸಮಿತಿ ಅಧ್ಯಕ್ಷ ರಾಮಣ್ಣ ನಾಯ್ಕೋಡಿ, ಉಪಾಧ್ಯಕ್ಷ ಪ್ರಭುಲಿಂಗ ದೇವತ್ಕಲ್, ಕಾರ್ಯದರ್ಶಿ ಸುಮಂಗಲಾ ಹೂಗಾರ, ಎಪಿಎಂಸಿ ಸದಸ್ಯರಾದ ಮಂಜೂರ ಅಹಮದ್, ಅಗರಖೇಡ, ನಾಗಪ್ಪ ಮಂಜಳಾಕರ್, ಮಲ್ಲು ಮೇತ್ರಿ, ಗಂಗೂಬಾಯಿ ರಾಠೋಡ, ಪ್ರಭಾವತಿ ಮೇತ್ರೆ, ಮನೋಹರ ರಾಠೋಡ, ಜಗದೀಶ ಪಡಶೆಟ್ಟಿ, ಭಗವಂಥರಾಯ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.