ಕಲಬುರಗಿ: ಜಿಲ್ಲೆಯ ಅಫಜಲಪುರ ತಾಲ್ಲೂಕಿನ ರೇವೂರ ಬಳಿ ದುಷ್ಕರ್ಮಿಗಳು ಹುಲ್ಲೂರ ಗ್ರಾಮದ ಚಂದ್ರಪ್ಪ (24) ಎಂಬ ಯುವಕನನ್ನು ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಗ್ರಾಮದ ಯುವತಿಯನ್ನು ಚಂದ್ರಪ್ಪ ಪ್ರೀತಿಸುತ್ತಿದ್ದ. ಈ ಬಗ್ಗೆ ಯುವತಿಯ ಪೋಷಕರು ಬುದ್ದಿ ಹೇಳಿದ್ದರೂ ಮತ್ತೆ ಸುತ್ತಾಟ ಮುಂದುವರಿಸಿದ್ದರು ಎನ್ನಲಾಗಿದೆ.
ಇದರಿಂದ ರೊಚ್ಚಿಗೆದ್ದ ಯುವತಿ ಕಡೆಯವರು ರೇವೂರ ಗ್ರಾಮದ ಹೊಲದಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.