ADVERTISEMENT

ಶೋಷಿತರ ಶಕ್ತಿ ಡಾ. ಬಿ.ಆರ್. ಅಂಬೇಡ್ಕರ್: ಶರಣು ವಸ್ತ್ರದ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2022, 4:13 IST
Last Updated 16 ಏಪ್ರಿಲ್ 2022, 4:13 IST
ಶಹಾಬಾದ್ ನಗರದ ಬಿಜೆಪಿ ಕಚೇರಿಯಲ್ಲಿ ಗುರುವಾರ ಬಿಜೆಪಿ ಎಸ್ಸಿ ಮೋರ್ಚಾ ವತಿಯಿಂದ ಅಂಬೇಡ್ಕರ್ ಜಯಂತಿ ಆಚರಿಸಲಾಯಿತು
ಶಹಾಬಾದ್ ನಗರದ ಬಿಜೆಪಿ ಕಚೇರಿಯಲ್ಲಿ ಗುರುವಾರ ಬಿಜೆಪಿ ಎಸ್ಸಿ ಮೋರ್ಚಾ ವತಿಯಿಂದ ಅಂಬೇಡ್ಕರ್ ಜಯಂತಿ ಆಚರಿಸಲಾಯಿತು   

ಶಹಾಬಾದ್: ‘ಬಿ.ಆರ್ ಅಂಬೇಡ್ಕರ್ ಕೇವಲ ದಲಿತ ಸಮುದಾಯದ ಆಶಾಕಿರಣವಾಗಿರಲಿಲ್ಲ. ಬದಲಾಗಿ ಇಡೀ ದೇಶದ ಶ್ರಮಿಕ, ಕಾರ್ಮಿಕ, ಶೋಷಿತರ ಶಕ್ತಿಯಾಗಿದ್ದರು. ಅವರ ಸಂವಿಧಾನದಿಂದಲೇ ಇಂದು ದೇಶ ನಡೆಯುತ್ತಿರುವುದು’ ಎಂದು ನಗರಸಭೆ ಸದಸ್ಯ ಶರಣು ವಸ್ತ್ರದ ಹೇಳಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಗುರುವಾರ ಬಿಜೆಪಿ ಎಸ್ಸಿ ಮೋರ್ಚಾ ವತಿಯಿಂದ ಆಯೋಜಿಸಲಾಗಿದ್ದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕನಕಪ್ಪ ದಂಡಗುಲಕರ ಮಾತನಾಡಿದರು.

ADVERTISEMENT

ದುರ್ಗಪ್ಪ ಪವಾರ, ಮಹದೇವ ಗೊಬ್ಬೂರಕರ, ಶ್ರೀಧರ್ ಜೋಶಿ, ಸದಾನಂದ ಕುಂಬಾರ, ಸಿದ್ರಾಮ ಕುಸಾಳೆ, ನಾಗರಾಜ ಮೇಲಗಿರಿ, ನಿಂಗಣ್ಣ ಹುಳಗೋಳಕರ, ಬಸವರಾಜ ಬಿರಾದಾರ, ರಾಕೇಶ್ ಮಿಶ್ರ, ರವಿ ರಾಠೋಡ, ಜಗದೀಶ ಸುಬೇದಾರ್, ಪಾರ್ವತಿ ಪವಾರ್, ದತ್ತಾ ಫಂಡ, ಸಂಜಯ್ ವಿಠಕರ್, ಅಮರ ಕೋರೆ ಸೇರಿದಂತೆ ಬಿಜೆಪಿ ಮುಖಂಡರು ಕಾರ್ಯಕರ್ತರು
ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.