ಕಲಬುರಗಿ: ಬೆಂಗಳೂರಿನ ಶ್ರೀ ಶ್ರೀನಿವಾಸ ಉತ್ಸವ ಬಳಗ ನೀಡುವ ’ಹರಿದಾಸ ಅನುಗ್ರಹ’ ಪ್ರಶಸ್ತಿಗೆ ನಗರದ ಕನ್ಸಲ್ಟಿಂಗ್ ಸಿವಿಲ್ ಎಂಜಿನಿಯರ್ಸ್ ಅಸೋಸಿಯೇಶನ್ ಅಧ್ಯಕ್ಷ ಮುರಳೀಧರ ಜಿ. ಕರಲಗಿಕರ್ ಭಾಜನರಾಗಿದ್ದಾರೆ.
ಇದೇ 22ರಂದು ಸಂಜೆ 6ಕ್ಕೆ ಬೆಂಗಳೂರಿನ ಉತ್ತರಾದಿ ಮಠದಲ್ಲಿ ನಡೆಯಲಿರುವ ಪುರಂದರದಾಸರ ಆರಾಧನಾ ಮಹೋತ್ಸವದಲ್ಲಿ ಕರಲಗಿಕರ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಉತ್ಸವ ಬಳಗದ ಅಧ್ಯಕ್ಷ ವಾದಿರಾಜ ತಾಯಲೂರ್ ತಿಳಿಸಿದ್ದಾರೆ.
ಕರಲಗಿಕರ್ ಅವರು ವೃತ್ತಿಯಿಂದ ಸಿವಿಲ್ ಎಂಜಿನಿಯರರಾಗಿದ್ದು, ಕೋವಿಡ್ ಸಂಕಷ್ಟದ ವೇಳೆ ಹಲವಾರು ಬಡವರು, ನಿರ್ಗತಿಕರಿಗೆ ಆಹಾರ ಕಿಟ್ ವಿತರಿಸಿದ್ದರು. ಅಲ್ಲದೇ ರೈತರು ಬೆಳೆದ ಹಣ್ಣು, ತರಕಾರಿಗಳ ಖರೀದಿಗೆ ತಾತ್ಕಾಲಿಕ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಿ ನೆರವಾಗಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.