ಆಳಂದ: ಪಟ್ಟಣದ ಸಂಬುದ್ಧ ಪದವಿ ಕಾಲೇಜಿನ ವಿದ್ಯಾರ್ಥಿನಿ ಭಾಗ್ಯಶ್ರೀ ಬಸವರಾಜ ಗುಡ್ಡದ ಅವರು ಕಲಬುರ್ಗಿಯಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ನಡೆದ ಯೋಗ ಸ್ಪರ್ಧೆಯಲ್ಲಿ ವಿಜೇತಳಾಗಿ ಒಡಿಶಾದಲ್ಲಿ ನಡೆಯುವ ಅಂತರ್ ರಾಜ್ಯಮಟ್ಟದ ವಿಶ್ವ ವಿದ್ಯಾಲಯಗಳ ಯೋಗ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ ಎಂದು ಪ್ರಾಚಾರ್ಯ ಡಾ.ಶಿವಾನಂದ ಹತ್ತಿ ತಿಳಿಸಿದ್ದಾರೆ.
ತಾಲ್ಲೂಕಿನ ಹಿರೋಳ್ಳಿ ಗ್ರಾಮದ ವಿದ್ಯಾರ್ಥಿನಿಯು ಸಂಬುದ್ಧ ಕಾಲೇಜಿನಲ್ಲಿ ಬಿಎಸ್ಸಿ ತೃತೀಯ ಸೆಮಿಸ್ಟರ್ನಲ್ಲಿ ಅಭ್ಯಾಸ ಮಾಡುತ್ತಿದ್ದಾರೆ. ಡಿ.25ರಿಂದ ಒಡಿಶಾದ ಭುವನೇಶ್ವರದಲ್ಲಿ ಅಂತರ್ ವಿಶ್ವ ವಿದ್ಯಾಲಯ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.