ADVERTISEMENT

ಬಸವ ಎಕ್ಸ್‌ಪ್ರೆಸ್, ಯಶವಂತಪುರ–ಬೀದರ್ ರೈಲು ಪುನರಾರಂಭ

​ಪ್ರಜಾವಾಣಿ ವಾರ್ತೆ
Published 16 ಜೂನ್ 2021, 15:17 IST
Last Updated 16 ಜೂನ್ 2021, 15:17 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಕಲಬುರ್ಗಿ: ಕೋವಿಡ್‌ ಲಾಕ್‌ಡೌನ್‌ ನಿಮಿತ್ತ ಪ್ರಯಾಣಿಕರ ಕೊರತೆಯಿಂದಾಗಿ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಮೈಸೂರು–ಬಾಗಲಕೋಟೆ ಬಸವ ಎಕ್ಸ್‌ಪ್ರೆಸ್ (7307) ರೈಲನ್ನು ಇದೇ 20ರಿಂದ ಪುನರಾರಂಭಿಸಲಾಗುತ್ತಿದೆ. ಅಲ್ಲದೇ, ಯಶವಂತಪುರ–ಬೀದರ್ (6271) ರೈಲು ಇದೇ 21ರಿಂದ ಸಂಚಾರ ಆರಂಭಿಸಲಿದೆ ಎಂದು ರೈಲ್ವೆ ಪ್ರಕಟಣೆ ತಿಳಿಸಿದೆ.

ರೈಲು ನಿಲ್ದಾಣ ಹಾಗೂ ರೈಲಿನಲ್ಲಿ ಪ್ರಯಾಣಿಕರು ಕೋವಿಡ್‌ ಸೋಂಕಿನಿಂದ ರಕ್ಷಣೆ ಪಡೆಯಲು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದೂ ಮನವಿ ಮಾಡಿದೆ. ಸದ್ಯಕ್ಕೆ ರೈಲ್ವೆಯು ಮುಂಗಡ ಟಿಕೆಟ್ ಕಾಯ್ದಿರಿಸಿದವರಿಗೆ ಮಾತ್ರ ಪ್ರಯಾಣಿಸಲು ಅವಕಾಶ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT