ADVERTISEMENT

ಕಮಲಾಪುರ | ಕ್ಷೇತ್ರ ಶಿಕ್ಷಣಾಧಿಕಾರಿಗೆ ಕೋವಿಡ್

​ಪ್ರಜಾವಾಣಿ ವಾರ್ತೆ
Published 21 ಜುಲೈ 2020, 13:42 IST
Last Updated 21 ಜುಲೈ 2020, 13:42 IST

ಕಮಲಾಪುರ: ಕಲಬುರ್ಗಿ ಉತ್ತರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗೆ ಸೋಮವಾರ ಕೋವಿಡ್- 19 ಸೊಂಕು ದೃಢಪಟ್ಟಿದೆ. ಇವರು ಜುಲೈ 18 ರಂದು ಕಚೇರಿಗೆ ಹಾಜರಾಗಿದ್ದರು.

ಅಧಿಕಾರಿಯನ್ನು ಐಸೋಲೇಶನ್ ವಾರ್ಡ್‌ಗೆ ದಾಖಲಿಸಲಾಗಿದೆ. ಇವರ ಜೊತೆ ಪ್ರಾಥಮಿಕ ಹಂತದಲ್ಲಿ ಸಂಪರ್ಕಕ್ಕೆ ಬಂದವರನ್ನು ಕ್ವಾರಂಟೈನ್ ಮಾಡಲಾಗುವುದು. ಕಚೇರಿಯನ್ನು ಸೀಲ್‌ಡೌನ್ ಮಾಡುವುದಿಲ್ಲ. ಸ್ಯಾನಿಟೈಸ್ ಮಾಡಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಅಪರ ಆಯುಕ್ತರ ಆಪ್ತ ಸಹಾಯಕ ಚೆನ್ನಬಸಪ್ಪ ಮುಧೋಳ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT