ಕಲಬುರ್ಗಿ: ಜಿಲ್ಲೆಯಾದ್ಯಂತ ಬಸ್ ಸಂಚಾರ ಆರಂಭಗೊಂಡಿದ್ದು, ಶಾಲಾ-ಕಾಲೇಜುಗಳು, ಸರ್ಕಾರಿ ಕಚೇರಿಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ.
ಸೋಮವಾರ ಧರಣಿ, ಪ್ರತಿಭಟನೆ, ಬೈಕ್ ರ್ಯಾಲಿ ನಡೆಸಿದ್ದ ಪ್ರತಿಭಟನಾಕಾರರು ಇಂದು ರೈಲ್ ರೋಖೋ ಹಮ್ಮಿಕೊಂಡಿದ್ದಾರೆ.
ಅಂಗಡಿ ಮುಂಗಟ್ಟುಗಳು ತೆರೆದಿದ್ದು, ವ್ಯಾಪಾರ- ವಹಿವಾಟು ಸಹಜವಾಗಿದೆ.
ಮುಂಜಾಗ್ರತಾ ಕ್ರಮವಾಗಿ ನಗರ ಸಾರಿಗೆ ಬಸ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಬಂದ್ ನಿಂದಾಗಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಸೋಮವಾರ ₹2 ಕೋಟಿ ಅಂದಾಜು ನಷ್ಟವಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.