ADVERTISEMENT

ಭುವನೇಶ್‌ ಕೆಕೆಆರ್‌ಟಿಸಿ ನೂತನ ಎಂ.ಡಿ.

​ಪ್ರಜಾವಾಣಿ ವಾರ್ತೆ
Published 26 ಜನವರಿ 2022, 2:46 IST
Last Updated 26 ಜನವರಿ 2022, 2:46 IST
ಭುವನೇಶ್ ಪಾಟೀಲ
ಭುವನೇಶ್ ಪಾಟೀಲ   

ಕಲಬುರಗಿ: ನಗರದಲ್ಲಿ ಕೇಂದ್ರ ಕಚೇರಿ ಹೊಂದಿರುವ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರನ್ನಾಗಿ 2018ನೇ ವೃಂದದ ಐಎಎಸ್‌ ಅಧಿಕಾರಿ ಭುವನೇಶ್ ದೇವಿದಾಸ್ ಪಾಟೀಲ ಅವರನ್ನು ವರ್ಗಾವಣೆ ಮಾಡಿ ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ.

ಭುವನೇಶ್ ಅವರು ಬೀದರ್ ಜಿಲ್ಲೆ ಬಸವಕಲ್ಯಾಣ ಉಪವಿಭಾಗಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಕೆಕೆಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಯಶವಂತ ಗುರುಕರ್ ಅವರು ಕಲಬುರಗಿ ಜಿಲ್ಲಾಧಿಕಾರಿ ವರ್ಗಾವಣೆಯಾಗಿದ್ದರಿಂದ ಆ ಸ್ಥಾನಕ್ಕೆ ಭುವನೇಶ್ ಪಾಟೀಲ ಅವರನ್ನು ವರ್ಗಾವಣೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT