ADVERTISEMENT

ಬಿಜೆಪಿ ಸಂಸ್ಥಾಪನಾ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2021, 3:38 IST
Last Updated 7 ಏಪ್ರಿಲ್ 2021, 3:38 IST
ಬಿಜೆಪಿ ಸಂಸ್ಥಾಪನಾ ದಿನದ ಅಂಗವಾಗಿ ಕಲಬುರ್ಗಿಯ ಪಕ್ಷದ ಕಚೇರಿಯಲ್ಲಿ ಸಂಸ್ಥಾಪಕರ ಭಾವಚಿತ್ರಕ್ಕೆ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೀಶ್ವರ್ ಪುಷ್ಪನಮನ ಸಲ್ಲಿಸಿದರು
ಬಿಜೆಪಿ ಸಂಸ್ಥಾಪನಾ ದಿನದ ಅಂಗವಾಗಿ ಕಲಬುರ್ಗಿಯ ಪಕ್ಷದ ಕಚೇರಿಯಲ್ಲಿ ಸಂಸ್ಥಾಪಕರ ಭಾವಚಿತ್ರಕ್ಕೆ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೀಶ್ವರ್ ಪುಷ್ಪನಮನ ಸಲ್ಲಿಸಿದರು   

ಕಲಬುರ್ಗಿ: ಭಾರತೀಯ ಜನತಾ ಪಾರ್ಟಿ ಸಂಸ್ಥಾಪನಾ ದಿನದ ಅಂಗವಾಗಿ ನಗರದ ಬಿಗ್ ಬಜಾರ್ ಬಳಿ ಇರುವ ಪಕ್ಷದ ಕಚೇರಿಯಲ್ಲಿ ಸಂಸ್ಥಾಪಕರ ಭಾವಚಿತ್ರಕ್ಕೆ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೀಶ್ವರ್ ಪುಷ್ಪನಮನ ಸಲ್ಲಿಸಿದರು.

ಬಿಜೆಪಿ (ಹಿಂದಿನ ಜನಸಂಘ) ಸಂಸ್ಥಾಪಕರಾದ ಶ್ಯಾಮಪ್ರಸಾದ್ ಮುಖರ್ಜಿ ಹಾಗೂ ದೀನದಯಾಳ್ ಉಪಾಧ್ಯಾಯ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಿದ ಬಳಿಕ ಮಾತನಾಡಿದ ಸಚಿವ ಯೋಗೀಶ್ವರ್, ಪಕ್ಷದ ತತ್ವ ಸಿದ್ಧಾಂತ ಗಟ್ಟಿಯಾಗಿದ್ದುದರಿಂದಲೇ ಇಂದು ಕೇಂದ್ರವೂ ಸೇರಿದಂತೆ ಹಲವು ರಾಜ್ಯಗಳಲ್ಲಿ ಅಧಿಕಾರದ ಗದ್ದುಗೆ ಹಿಡಿದಿದೆ ಎಂದರು.

ಸಂಸದ ಡಾ.ಉಮೇಶ ಜಾಧವ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ, ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಅಂಬಾರಾಯ ಅಷ್ಠಗಿ, ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ, ಜಿ.ಪಂ. ಸದಸ್ಯ ಶಿವರಾಜ ಪಾಟೀಲ ರದ್ದೇವಾಡಗಿ, ಮಹಾನಗರ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದಾಜಿ ಪಾಟೀಲ, ಕಾರ್ಯದರ್ಶಿ ಸೂರಜ್ ಪ್ರಸಾದ್ ತಿವಾರಿ, ವಕ್ತಾರ ಅರುಣ ಕುಲಕರ್ಣಿ, ಮಹಾದೇವ ಬೆಳಮಗಿ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.