ಕಮಲಾಪುರ: ಪಟ್ಟಣ ಸಮೀಪದ ಹೊಲದಲ್ಲಿ ಭಾನುವಾರ ಬೆಳಿಗ್ಗೆ 10ಕ್ಕೆ ಹಾವು ಕಡಿತದಿಂದ ಬಾಲಕ ಮೃತಪಟ್ಟಿದ್ದಾನೆ.
ಬಸಯ್ಯ ಮಲ್ಲಯ್ಯ ಹಿರೇಮಠ (9) ಮೃತ ಬಾಲಕ. 3ನೇ ತರಗತಿಯಲ್ಲಿ ಓದುತ್ತಿದ್ದ ಆತ ಶಾಲೆಗೆ ರಜೆ ಇದ್ದ ಕಾರಣ ತಾಯಿಯೊಂದಿಗೆ ಹೊಲಕ್ಕೆ ತೆರಳಿದ್ದ. ಕಲಬುರ್ಗಿಯ ಜಿಲ್ಲಾಸ್ಪತ್ರೆಗೆ ಕರೆದೊಯ್ಯವ ಮಾರ್ಗದ ಮಧ್ಯೆಯೇ ಕೊನೆಯುಸಿರೆಳೆದ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.