ಕಲಬುರ್ಗಿ: ಇಲ್ಲಿನ ಶರಣಬಸವೇಶ್ವರ ಕೆರೆಯಲ್ಲಿ ಶನಿವಾರ ಮೀನು ಹಿಡಿಯಲು ಹೋದ 16 ವರ್ಷದ ಬಾಲಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.
ಇಬ್ಬರು ಬಾಲಕರು ಮೀನು ಹಿಡಿಯಲು ಕೆರೆಗೆ ಇಳಿದಿದ್ದರು. ಆಳಕ್ಕೆ ಹೋದಾಗ ಒಬ್ಬ ಬಾಲಕ ನೀರಿನಲ್ಲಿ ಮುಳುಗುತ್ತಿರುವುದನ್ನು ಕಂಡು ಇನ್ನೊಬ್ಬ ಬಾಲಕ ಪರಾರಿಯಾಗಿದ್ದಾನೆ. ಇದೇ ಸಂದರ್ಭದಲ್ಲಿ ಪಾದಚಾರಿಗಳು ನೀರಿನಲ್ಲಿ ಮುಳುಗುತ್ತಿದ್ದ ಬಾಲಕನನ್ನು ಕಂಡು, ರಕ್ಷಿಸಲು ಮುಂದಾದರು. ಆದರೂ ಪ್ರಯತ್ನ ಫಲ ನೀಡಲಿಲ್ಲ. ನೋಡನೋಡಿತ್ತಿದ್ದಂತೆಯೇ ಜನರ ಕಣ್ಣ ಮುಂದೆಯೇ ಬಾಲಕ ಜಲಸಮಾಧಿಯಾದ.
ನಂತರ ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕ ದಳ ಸಿಬ್ಬಂದಿ ಮತ್ತು ಎಸ್.ಡಿ.ಆರ್.ಎಫ್ ತಂಡದವರು ಶವವನ್ನು ಮೇಲಕ್ಕೆತ್ತಿದರು. ಬಾಲಕನ ಗುರುತು ಪತ್ತೆಯಾಗಿಲ್ಲ. ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.