ADVERTISEMENT

ಕನಕಪುರ: ₹5 ಕೋಟಿ ಮೊತ್ತದ ಬ್ರಿಜ್ ಕಂ ಬ್ಯಾರೇಜ್‌ಗೆ ಶಿಲಾನ್ಯಾಸ

​ಪ್ರಜಾವಾಣಿ ವಾರ್ತೆ
Published 25 ಜನವರಿ 2022, 3:33 IST
Last Updated 25 ಜನವರಿ 2022, 3:33 IST
ಚಿಂಚೋಳಿ ತಾಲ್ಲೂಕು ಕನಕಪುರದಲ್ಲಿ ಬ್ರಿಜ್ ಕಂ ಬ್ಯಾರೇಜ್‌ ನಿರ್ಮಾಣಕ್ಕೆ ಶಾಸಕ ಅವಿನಾಶ ಜಾಧವ ಸೋಮವಾರ ಶಿಲಾನ್ಯಾಸ ನೆರವೇರಿಸಿದರು. ಗ್ರಾ.ಪಂ. ಅಧ್ಯಕ್ಷೆ ಜಗದೇವಿ, ಇಒ ಅನಿಲಕುಮಾರ ರಾಠೋಡ್, ಶಿವಶರಣಪ್ಪ ಕೇಶ್ವಾರ ಇದ್ದರು
ಚಿಂಚೋಳಿ ತಾಲ್ಲೂಕು ಕನಕಪುರದಲ್ಲಿ ಬ್ರಿಜ್ ಕಂ ಬ್ಯಾರೇಜ್‌ ನಿರ್ಮಾಣಕ್ಕೆ ಶಾಸಕ ಅವಿನಾಶ ಜಾಧವ ಸೋಮವಾರ ಶಿಲಾನ್ಯಾಸ ನೆರವೇರಿಸಿದರು. ಗ್ರಾ.ಪಂ. ಅಧ್ಯಕ್ಷೆ ಜಗದೇವಿ, ಇಒ ಅನಿಲಕುಮಾರ ರಾಠೋಡ್, ಶಿವಶರಣಪ್ಪ ಕೇಶ್ವಾರ ಇದ್ದರು   

ಚಿಂಚೋಳಿ: ಮತಕ್ಷೇತ್ರ ಸಮಗ್ರ ಅಭಿವೃದ್ಧಿ ಹೊಂದಬೇಕಾದರೆ ಜನರ ಸಹಕಾರ, ಜನಪ್ರತಿನಿಧಿಗಳ ನಿರಂತರ ಪ್ರಯತ್ನ ಮತ್ತು ಅಧಿಕಾರಿಗಳ ಶ್ರಮದಿಂದ ಮಾತ್ರ ಸಾಧ್ಯ ಎಂದು ಶಾಸಕ ಡಾ. ಅವಿನಾಶ ಉಮೇಶ ಜಾಧವ ಇಂದಿಲ್ಲಿ ತಿಳಿಸಿದರು.

ತಾಲ್ಲೂಕಿನ ಕನಕಪುರ ಗ್ರಾಮದ ಬಳಿ ಮುಲ್ಲಾಮಾರಿ ನದಿಗೆ ಅಡ್ಡಲಾಗಿ ಕನಕಪುರ ಗಾರಂಪಳ್ಳಿ ರಸ್ತೆಗೆ ನಿರ್ಮಿಸುವ ಅಂದಾಜು ₹5 ಕೋಟಿ ಮೊತ್ತದ ಬ್ರಿಜ್ ಕಂ ಬ್ಯಾರೇಜು ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಸೋಮವಾರ ಮಾತನಾಡಿದರು.

ಕೆಕೆಡಿಬಿಯ ಮ್ಯಾಕ್ರೊ ಯೋಜನೆ ಅಡಿಯಲ್ಲಿ ₹5 ಕೋಟಿ ಮಂಜೂರು ಮಾಡಿಸಿ ಸಣ್ಣ ನೀರಾವರಿ ಇಲಾಖೆಯ ಮೂಲಕ ಕಾಮಗಾರಿ ಅನುಷ್ಠಾನಗೊಳಿಸಲಾಗುತ್ತಿದೆ. ಇದರಿಂದ 150 ಹೆಕ್ಟೇರ್ ಜಮೀನಿಗೆ ನೀರಾವರಿ ಸೌಲಭ್ಯದ ಜತೆಗೆ ಗಾರಂಪಳ್ಳಿ ಕನಕಪುರ ಮಧ್ಯೆ ಸಂಪರ್ಕ, ಅಂತರ್ಜಲ ವೃದ್ಧಿ ಮತ್ತು ಜನ ಜಾನುವಾರುಗಳಿಗೆ ಕುಡಿಯುವ ನೀರು ಒದಗಿಸಲು ಈ ಬ್ಯಾರೇಜ್ ಉಪಯೋಗವಾಗಲಿದೆ ಎಂದು ಅವರು ತಿಳಿಸಿದರು.

ADVERTISEMENT

ತಾ.ಪಂ. ಮಾಜಿ ಸದಸ್ಯ ಬಸವಣಪ್ಪ ಕುಡಳ್ಳಿ ಅವರು ಕನಕಪುರಕ್ಕೆ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ ಮಂಜೂರಿಗೆ ಮನವಿ ಮಾಡಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಸಣ್ಣ ನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಶಿವಶರಣಪ್ಪ ಕೇಶ್ವಾರ ಅವರು, 99.2 ಮೀಟರ್ ಉದ್ದ, 2.5 ಮೀಟರ್ ಎತ್ತರದ ಈ ಬ್ರಿಜ್ ಕಂ ಬ್ಯಾರೇಜು 20 ಹಂತಗಳು ಹೊಂದಿರುತ್ತದೆ. 11 ತಿಂಗಳ ಕಾಲಮಿತಿಯಲ್ಲಿ ಕಾಮಗಾರಿ ಮುಗಿಯಲಿದೆ. ಗುಣಮಟ್ಟದ ಕೆಲಸ ನೀವು ಪಡೆಯಿರಿ. ನೀವೂ ಸಹಕಾರ ನೀಡಿದರೆ 6 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದರು

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಗದೇವಿ ಸಂಜೀವಕುಮಾರ ವಗ್ಗಿ, ಉಪಾಧ್ಯಕ್ಷ ಪ್ರಕಾಶರೆಡ್ಡಿ, ಜಗದೀಶಸಿಂಗ್ ಠಾಕೂರು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅನಿಲಕುಮಾರ ರಾಠೋಡ್, ಆರೋಗ್ಯ ರಕ್ಷಾ ಸಮಿತಿಯ ಸದಸ್ಯ ಸತೀಶರೆಡ್ಡಿ ತಾಜಲಾಪುರ, ಹಣಮಂತ ಭೋವಿ, ರೇವಣಸಿದ್ದಯ್ಯ ಹಿರೇಮಠ, ಉಮಾ ಪಾಟೀಲ, ವೀರಭದ್ರಪ್ಪ ಮಲಕೂಡ, ವೀರಶೆಟ್ಟಿ ಗಾರಂಪಳ್ಳಿ ಹಾಗೂ ಗ್ರಾಮದ ಮುಖಂಡರು ಇದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.