ಕಲಬುರ್ಗಿ: ‘ಸರ್ವರಿಗೂ ಸಂವಿಧಾನ’ ಯೋಜನೆಯಡಿ ರಂಗಾಯಣದಿಂದ ನಾಟಕ ಸಿದ್ಧಪಡಿಸಲು ಕಲಾವಿದರ ಆಯ್ಕೆ ಮಾಡಬೇಕಾಗಿದೆ. ಇದಕ್ಕಾಗಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಕಲಾವಿದರಿಂದ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು ಫೆ. 9ರವರೆಗೆ ವಿಸ್ತರಿಸಲಾಗಿದೆ ಎಂದು ರಂಗಾಯಣದ (ಪ್ರಭಾರ) ಆಡಳಿತಾಧಿಕಾರಿ ತಿಳಿಸಿದ್ದಾರೆ.
ಅರ್ಜಿ ಸಲ್ಲಿಸುವ ಕಲಾವಿದರ ವಯೋಮಿತಿ 18 ರಿಂದ 40 ವರ್ಷ. ಈ ಕಲಾವಿದರನ್ನು ಹೊರಗುತ್ತಿಗೆ ಆಧಾರದ ಮೇಲೆತಾತ್ಕಾಲಿಕವಾಗಿ3ತಿಂಗಳಅವಧಿಗೆನೇಮಕಮಾಡಿಕೊಳ್ಳಲಾಗುತ್ತದೆ.www.rangayanakalaburagi.comವೆಬ್ಸೈಟ್ದಿಂದ ಅರ್ಜಿ ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿ, ‘ಆಡಳಿತಾಧಿಕಾರಿಗಳು, ರಂಗಾಯಣ, ಸುವರ್ಣ ಸಾಂಸ್ಕೃತಿಕ ಸಮುಚ್ಚಯ, ಸೇಡಂ ಶಹಾಬಾದ್ ವರ್ತುಲ ರಸ್ತೆ, ಕಲಬುರ್ಗಿ-585105’ ಈ ವಿಳಾಸಕ್ಕೆ ಕಳುಹಿಸಬೇಕು. ಮಾಹಿತಿಗೆ08472-227735ಗೆ ಸಂಪರ್ಕಿಸಲು ಕೋರಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.