ಆಳಂದ: ತಾಲ್ಲೂಕಿನ ನರೋಣಾ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಚಿನ್ನದ ಆಭರಣಗಳನ್ನು ದೋಚುತ್ತಿದ್ದ ಸರಗಳ್ಳನನ್ನು ಮಂಗಳವಾರ ಬಂಧಿಸಿದ ಪೊಲೀಸರು ₹ 1 ಲಕ್ಷ ಮೌಲ್ಯದ ಚಿನ್ನದ ಆಭರಣಗಳನ್ನು ಜಪ್ತಿ ಮಾಡಿದ್ದಾರೆ.
ಕಡಗಂಚಿ ಗ್ರಾಮದ ನಾಗೇಶ ದತ್ತು ಆಲೂರೆ ಬಂಧಿತ ಆರೋಪಿ. ಗ್ರಾಮದ ಯಲ್ಲಮ್ಮ ದೇವಿ ದೇವಸ್ಥಾನದ ಬಾಗಿಲು ಬೀಗ ಮುರಿದು, ದೇವಿಯ ಮೂರ್ತಿಗೆ ಹಾಕಿದ ₹ 50 ಸಾವಿರ ಮೌಲ್ಯದ ಚಿನ್ನದ ಗುಂಡಿನ ಸರ ಹಾಗೂ ₹ 50 ಸಾವಿರ ಮೌಲ್ಯದ ಪತ್ತಿನ ಸರ ದೋಚಿ ಪರಾರಿಯಾಗಿದ್ದನು.
ಪಿಎಸ್ಐ ಉದ್ದಂಡಪ್ಪ ನೇತೃತ್ವದಲ್ಲಿ ಸಿಬ್ಬಂದಿ ಮಂಗಳವಾರ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.