ADVERTISEMENT

ಪಕ್ಷ ಯಾರಿಗೆ ಟಿಕೆಟ್ ಕೊಡುತ್ತದೋ ಅವರ ಪರ ಕೆಲಸ ಮಾಡುವೆ: ವಿಜಯೇಂದ್ರ

​ಪ್ರಜಾವಾಣಿ ವಾರ್ತೆ
Published 22 ಜನವರಿ 2021, 6:05 IST
Last Updated 22 ಜನವರಿ 2021, 6:05 IST
   

ಕಲಬುರ್ಗಿ: ಬಸವ ಕಲ್ಯಾಣ ಉಪಚುನಾವಣೆಯಲ್ಲಿ ಪಕ್ಷ ಯಾರಿಗೆ ಟಿಕೆಟ್ ‌ಕೊಡುತ್ತದೋ ಅವರ ಪರ ಕೆಲಸ ಮಾಡುತ್ತೇನೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ‌ಬಿ.ವೈ.ವಿಜಯೇಂದ್ರ ತಿಳಿಸಿದರು.

ನಗರದಲ್ಲಿ ಶುಕ್ರವಾರ ಆರಂಭವಾದ ಶಿವಾಚಾರ್ಯರ ಸಮಾವೇಶದಲ್ಲಿ ಭಾಗವಹಿಸಲು ಬಂದಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪಕ್ಷದ ಕಾರ್ಯಕರ್ತರು ಯಡಿಯೂರಪ್ಪ ಅವರ ಮೇಲಿನ ಪ್ರೀತಿಯಿಂದ ನನಗೆ ಟಿಕೆಟ್ ‌ನೀಡುವಂತೆ ಒತ್ತಾಯಿಸುತ್ತಿದ್ದಾರೆ. ಅವರ ಪ್ರೀತಿಗೆ ಋಣಿಯಾಗಿದ್ದೇನೆ’ಎಂದರು.

ತಾವು ನಿಲ್ಲುತ್ತೇನೋ ಇಲ್ಲವೋ ಎಂಬುದನ್ನು ಸ್ಪಷ್ಟಪಡಿಸಲಿಲ್ಲ.

ADVERTISEMENT

ಖಾತೆ ಹಂಚಿಕೆಯಾದಾಗ ಅಸಮಾಧಾನ ಸಹಜ. ಮುಖ್ಯಮಂತ್ರಿ ಅವರು ‌ಅಸಮಾಧಾನಗೊಂಡ ಸಚಿವರೊಂದಿಗೆ ಮಾತನಾಡಿ ಸಮಾಧಾನ ಮಾಡಲಿದ್ದಾರೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.