ADVERTISEMENT

ಜವಳಿ ಪಾರ್ಕ್‌ ರದ್ದು: ಕೇಂದ್ರ ಸರ್ಕಾರ ಸ್ಪಷ್ಟನೆ

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2021, 3:17 IST
Last Updated 16 ಫೆಬ್ರುವರಿ 2021, 3:17 IST

ಕಲಬುರ್ಗಿ:ತಾಲ್ಲೂಕಿನ ನಂದೂರ– ಕೆಸರಟಗಿ ಕೈಗಾರಿಕಾ ಪ್ರದೇಶದಲ್ಲಿ‌‌ ಸ್ಥಾಪಿಸಲು ಉದ್ದೇಶಿಸಿದ್ದ ‘ಜವಳಿ ಪಾರ್ಕ್‌’ ಅನ್ನು ಸಾಧನ– ಸಲಕರಣೆಗಳ ಕೊರತೆ ಕಾರಣ ಕೈಬಿಟ್ಟಿರುವುದಾಗಿ ಕೇಂದ್ರ ಸರ್ಕಾರ ಮತ್ತೆ ಸ್ಪಷ್ಟಪಡಿಸಿದೆ.

ಸಂಸದ ಡಾ.ಉಮೇಶ ಜಾಧವ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಜವಳಿ ಸಚಿವೆ ಸ್ಮೃತಿ ಇರಾಣಿ ಅವರು, ‘ಜವಳಿ ಪಾರ್ಕ್‌ ಸ್ಥಾಪನೆಗೆ ಎಸ್‌ಪಿವಿ ಸದಸ್ಯರು ವಂತಿಗೆ ಪಾವತಿಸಲು ನಿರಾಸಕ್ತಿ ತೋರಿದ್ದಾರೆ. ಪಾರ್ಕ್‌ ಸ್ಥಾಪನೆಗೆ ಬೇಕಾದ ಮೂಲಸೌಕರ್ಯಗಳು ಕೊರತೆ ಕಾರಣ ಇದನ್ನು ಕೈಬಿಡಲಾಗಿದೆ’ ಎಂದು ತಿಳಿಸಿದ್ದಾರೆ.

ಜವಳಿ ಪಾರ್ಕ್‌ ಸ್ಥಾಪನೆ ಉದ್ದೇಶ ಕೈ ಬಿಟ್ಟಾಗ 2020ರ ಫೆ. 11ರಂದು ‘ಪ್ರಜಾವಾಣಿ’ ವಿಸ್ತೃತ ವರದಿ ಪ್ರಕಟಿಸಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.