ADVERTISEMENT

ರಾಮರಾವ ಮಹಾರಾಜರ ಪುಣ್ಯಸ್ಮರಣೆ

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2022, 6:49 IST
Last Updated 1 ನವೆಂಬರ್ 2022, 6:49 IST
ಕಲಬುರಗಿಯಲ್ಲಿ ಆಯೋಜಿಸಿದ್ದ ಬಂಜಾರ ಸಮಾಜದ ಧರ್ಮಗುರು ರಾಮರಾವ ಮಹಾರಾಜರ ಎರಡನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ, ಸಂಸದ ಡಾ.ಉಮೇಶ ಜಾಧವ, ಚಂದು ಪಾಟೀಲ ಹಾಗೂ ಸಮಾಜದ ಮುಖಂಡರು ಇದ್ದರು
ಕಲಬುರಗಿಯಲ್ಲಿ ಆಯೋಜಿಸಿದ್ದ ಬಂಜಾರ ಸಮಾಜದ ಧರ್ಮಗುರು ರಾಮರಾವ ಮಹಾರಾಜರ ಎರಡನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ, ಸಂಸದ ಡಾ.ಉಮೇಶ ಜಾಧವ, ಚಂದು ಪಾಟೀಲ ಹಾಗೂ ಸಮಾಜದ ಮುಖಂಡರು ಇದ್ದರು   

ಕಲಬುರಗಿ: ಬಂಜಾರ ಸಮಾಜದ ಧರ್ಮಗುರು ರಾಮರಾವ ಮಹಾರಾಜ ಅವರ ಎರಡನೇ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಬಂಜಾರ ಲಂಬಾಣಿ ಸರ್ಕಾರಿ, ಅರೆ ಸರ್ಕಾರಿ ನಿವೃತ್ತ ನೌಕರರ ಸಂಘ ಹಾಗೂ ಕರ್ನಾಟಕ ಪ್ರದೇಶ ಬಂಜಾರ (ಲಂಬಾಣಿ) ಸೇವಾ ಸಂಘದ ಆಶ್ರಯದಲ್ಲಿ ನಗರದಲ್ಲಿ ಭಾನುವಾರ ಆಯೋಜಿಸಲಾಗಿತ್ತು.

ಕೇಂದ್ರ ಸಚಿವ ಭಗವಂತ ಖೂಬಾ ರಾಮರಾವ ಮಹಾರಾಜರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಸಂಸದ ಡಾ.ಉಮೇಶ ಜಾಧವ ಅಧ್ಯಕ್ಷತೆ ವಹಿಸಿದ್ದರು.

ಕರ್ನಾಟಕ ನವೀಕರಿಸಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷ ಚಂದು ಪಾಟೀಲ, ಕರ್ನಾಟಕ ಪ್ರದೇಶ ಬಂಜಾರ ಲಂಬಾಣಿ ಸೇವಾ ಸಂಘದ ಕಾರ್ಯಾಧ್ಯಕ್ಷ ವಿಠಲ್ ಜಾಧವ, ಬಂಜಾರ ಸರ್ಕಾರಿ ಅರೆಸರ್ಕಾರಿ ನಿವೃತ್ತ ನೌಕರರ ಸಂಘದ ಸಂಸ್ಥಾಪಕ ಅಧ್ಯಕ್ಷ ಬಿ.ಬಿ.ನಾಯಕ, ಪಿ.ಜಿ. ರಾಠೋಡ, ಎಸ್.ಎಸ್. ಪವಾರ, ರಾಮಚಂದ್ರ ಜಾಧವ, ಬಲದೇವ ರಾಠೋಡ, ಹೋಬಸಿಂಗ್‌ ಚವ್ಹಾಣ, ಹೀರಾಮಣಿ, ಲಾಲಪಾ ರಾಠೋಡ, ವಿಠಲ್ ಚವ್ಹಾಣ, ರಮೇಶ ಚವ್ಹಾಣ, ಸುರೇಶ ಜಾಧವ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.