ಕಲಬುರ್ಗಿ: ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಥಳಿಸಿರುವ ಘಟನೆಯನ್ನು ಶಾಸಕಹಾಗೂ ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ಖಂಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಯಾದಗಿರಿಯ ಘಟನೆ ನಾಚಿಕೆಗೇಡಿನಿಂದ ಕೂಡಿದೆ. ಈ ಘಟನೆ ಇಂದಿನ ಯುವಕರ ಕುಸಿಯುತ್ತಿರುವ ನೈತಿಕತೆಯ ಸಂಕೇತವಾಗಿರುವುದಲ್ಲದೇ, ತಾವು ಏನು ಬೇಕಾದರೂ ಮಾಡಬಹುದು ಎನ್ನುವ ಅವರ ಧೋರಣೆಯನ್ನು ತೋರಿಸುತ್ತಿದೆ ಎಂದಿದ್ದಾರೆ.
ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಸರ್ಕಾರವನ್ನೂ ಟೀಕಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.