ADVERTISEMENT

ಮಧುಕರ್ ಶೆಟ್ಟಿ ಸ್ಮಾರಕ ನಿರ್ಮಾಣ; ಸಂತೋಷ ಹೆಗಡೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 1 ಜನವರಿ 2019, 18:03 IST
Last Updated 1 ಜನವರಿ 2019, 18:03 IST
ಸಂತೋಷ ಹೆಗಡೆ
ಸಂತೋಷ ಹೆಗಡೆ   

ಕಲಬುರ್ಗಿ: ‘ಈಚೆಗೆ ನಿಧನರಾದ ಪೊಲೀಸ್ ಅಧಿಕಾರಿ ಮಧುಕರ್ ಶೆಟ್ಟಿ ಅವರ ಸ್ಮಾರಕವನ್ನು ಸರ್ಕಾರ ನಿರ್ಮಾಣ ಮಾಡಬೇಕು’ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ ಹೆಗಡೆ ಆಗ್ರಹಿಸಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸರ್ಕಾರ ಸಿನಿಮಾದವರಿಗೆ ಸ್ಮಾರಕ ನಿರ್ಮಿಸುತ್ತದೆ. ಸಮಾಜಕ್ಕೆ ಅವರು ಏನು ಮಾಡಿದ್ದಾರೆ. ನಟನೆ ಮಾಡಿದ್ದಾರೆ, ಹಣ ಮಾಡಿದ್ದಾರೆ. ಅವರಿಗೆ ನೀಡಿದಷ್ಟು ಪ್ರಾಧಾನ್ಯತೆ ದಕ್ಷ ಅಧಿಕಾರಿಗಳಿಗೆ ಇಲ್ಲದಂತಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದರು.

‘ಮಧುಕರ್ ಶೆಟ್ಟಿ ಅವರ ಕಾರ್ಯದಕ್ಷತೆ, ಪ್ರಾಮಾಣಿಕತೆ ಏನು ಎಂಬುದು ಮುಂದಿನ ಪೀಳಿಗೆಗೆ ಗೊತ್ತಾಗಬೇಕು. ಆದ್ದರಿಂದ ಸ್ಮಾರಕ ನಿರ್ಮಾಣ ಮಾಡಬೇಕು. ಇದಕ್ಕೆ ನಾನೂ ಕೂಡ ಆರ್ಥಿಕ ಸಹಾಯ ಮಾಡುತ್ತೇನೆ. ಶೆಟ್ಟಿ ಅವರಿಗೆ ತಮ್ಮ ವೃತ್ತಿ ಜೀವನದಲ್ಲಿ ಸಿಗಬೇಕಾದ ಮಾನ್ಯತೆ ಸಿಗಲಿಲ್ಲ. ಪ್ರಾಮಾಣಿಕ ಅಧಿಕಾರಿಗಳಿಗೆ ಆಡಳಿತ ಯಾವಾಗಲೂ ವಿರೋಧಿಯಾಗಿರುತ್ತದೆ. ಹಿಂದಿನ ಸರ್ಕಾರ, ಈಗಿನ ಸರ್ಕಾರ ಅಂತ ಅಲ್ಲ, ಎಲ್ಲರೂ ಒಂದೇ’ ಎಂದರು.

ADVERTISEMENT

‘ಮಧುಕರ್ ಶೆಟ್ಟಿ ಸಾವಿನ ಬಗ್ಗೆ ನನಗೆ ಯಾವುದೇ ರೀತಿಯ ಸಂಶಯ ಇಲ್ಲ. ಅವರ ಕುಟುಂಬದವರು ಕೂಡ ಅನುಮಾನ ವ್ಯಕ್ತಪಡಿಸಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.