ADVERTISEMENT

ಕಲುಬರಗಿ: ಪರೀಕ್ಷಾ ಬಾಹ್ಯ ಹಿರಿಯ ಮೇಲ್ವಿಚಾರಕರ ನೇಮಕಾತಿ ರದ್ದತಿಗೆ ವಿರೋಧ

​ಪ್ರಜಾವಾಣಿ ವಾರ್ತೆ
Published 29 ಮೇ 2022, 5:05 IST
Last Updated 29 ಮೇ 2022, 5:05 IST
ಕಲುಬರಗಿ ನಗರದ ಗುಲಬರ್ಗಾ ವಿವಿಯ ಪದವಿ ಪರೀಕ್ಷೆಗಳ ಬಾಹ್ಯ ಹಿರಿಯ ಮೇಲ್ವಿಚಾರಕರ ನೇಮಕಾತಿ ರದ್ದತಿ ಆದೇಶ ಹಿಂಪಡೆಯುವಂತೆ ಹೈದರಾಬಾದ್ ಕರ್ನಾಟಕ ಸರ್ಕಾರಿ ಕಾಲೇಜು ಅಧ್ಯಾಪಕರ ಸಂಘದ ಪದಾಧಿಕಾರಿಗಳು ಶನಿವಾರ ವಿವಿ ಕುಲಪತಿ ಪ್ರೊ.ದಯಾನಂದ ಅಗಸರ ಅವರಿಗೆ ಮನವಿ ಸಲ್ಲಿಸಿದರು
ಕಲುಬರಗಿ ನಗರದ ಗುಲಬರ್ಗಾ ವಿವಿಯ ಪದವಿ ಪರೀಕ್ಷೆಗಳ ಬಾಹ್ಯ ಹಿರಿಯ ಮೇಲ್ವಿಚಾರಕರ ನೇಮಕಾತಿ ರದ್ದತಿ ಆದೇಶ ಹಿಂಪಡೆಯುವಂತೆ ಹೈದರಾಬಾದ್ ಕರ್ನಾಟಕ ಸರ್ಕಾರಿ ಕಾಲೇಜು ಅಧ್ಯಾಪಕರ ಸಂಘದ ಪದಾಧಿಕಾರಿಗಳು ಶನಿವಾರ ವಿವಿ ಕುಲಪತಿ ಪ್ರೊ.ದಯಾನಂದ ಅಗಸರ ಅವರಿಗೆ ಮನವಿ ಸಲ್ಲಿಸಿದರು   

ಕಲುಬರಗಿ:ಗುಲಬರ್ಗಾ ವಿಶ್ವವಿದ್ಯಾಲಯದ ಪದವಿ ಪರೀಕ್ಷೆಗಳ ಬಾಹ್ಯ ಹಿರಿಯ ಮೇಲ್ವಿಚಾರಕರ ನೇಮಕಾತಿ ರದ್ದುಪಡಿಸಿದಆದೇಶವನ್ನು ಹಿಂಪಡೆಯುವಂತೆ ಒತ್ತಯಿಸಿ ಹೈದರಾಬಾದ್ ಕರ್ನಾಟಕ ಸರ್ಕಾರಿ ಕಾಲೇಜು ಅಧ್ಯಾಪಕರ ಸಂಘದ ಪದಾಧಿಕಾರಿಗಳು ಶನಿವಾರ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ದಯಾನಂದ ಅಗಸರ ಅವರಿಗೆ ಮನವಿಪತ್ರ ಸಲ್ಲಿಸಿದರು.

ಸಂಘದವಿಭಾಗೀಯ ಅಧ್ಯಕ್ಷ ಡಾ.ಶರಣಪ್ಪ ಸೈದಾಪುರ ಮಾತನಾಡಿ,ಪರೀಕ್ಷಾ ಮತ್ತು ಇಡೀ ಶಿಕ್ಷಣ ವ್ಯವಸ್ಥೆಯನ್ನು ಹಾಳು ಮಾಡುತ್ತಿರುವ ವಿಶ್ವವಿದ್ಯಾಲಯದ ಕ್ರಮವು ಪ್ರಜಾತಂತ್ರ ವಿರೋಧಿಯಾಗಿದೆ. ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಕಾಲೇಜು ಅಧ್ಯಾಪಕರಿಗೂ ಪರೀಕ್ಷಾ ಮೇಲ್ವಿಚಾರಕರ ಪಟ್ಟಿಯಲ್ಲಿ ಪ್ರಾತಿನಿಧ್ಯ ನೀಡಲಾಗಿದೆ. ಒಂದು ವೇಳೆ ಪರೀಕ್ಷಾ ಮೇಲ್ವಿಚಾರಕರ ಪಟ್ಟಿಯಲ್ಲಿ ಅನ್ಯಾಯ ಆಗಿದ್ದರೆ ಅದನ್ನು ಪರಿಷ್ಕರಿಸಬೇಕೆ ಹೊರತು ರದ್ದುಪಡಿಸಬಾರದು ಎಂದರು.

ಏಕಾಏಕಿ ರದ್ದತಿ ಮಾಡಿದ್ದರಿಂದ ಪರೀಕ್ಷಾ ಮೇಲ್ವಿಚಾರಕರಾಗಿ ಕಾರ್ಯನಿರ್ವಹಿಸುತ್ತಿರುವ ಅಧ್ಯಾಪಕರಿಗೆ ಅನ್ಯಾಯ ಮಾಡಿದಂತಾಗುತ್ತದೆ. ವಿಶ್ವವಿದ್ಯಾಲಯವು ತಾನೇಸಿದ್ಧಪಡಿಸಿದ ಪಟ್ಟಿಯನ್ನು ಉಲ್ಲಂಘಿಸುತ್ತಿರುವುದು ಸರಿಯಾದ ಕ್ರಮವಲ್ಲ. ಇದರಿಂದ ವಿಶ್ವವಿದ್ಯಾಲಯಕ್ಕೆ ಕೆಟ್ಟ ಹೆಸರು ಬರುತ್ತದೆ. ಪದವಿ ಪರೀಕ್ಷೆಗಳು ಸುಗಮವಾಗಿ ನಡೆದು, ಗುಣಾತ್ಮಕ ಶಿಕ್ಷಣ ಖಾತ್ರಿಪಡಿಸಲು ವೀಕ್ಷಣಾ ತಂಡಗಳು ಮತ್ತು ಬಾಹ್ಯ ಹಿರಿಯ ಮೇಲ್ವಿಚಾರಕರ ನೇಮಕಾತಿ ಅವಶ್ಯಕವಾಗಿದೆ ಎಂದು ಹೇಳಿದರು.

ADVERTISEMENT

ಪದಾಧಿಕಾರಿಗಳಾದ ಡಾ.ಚಿನ್ನಾ ಆಶಪ್ಪ, ಡಾ.ಶರಣಪ್ಪ ಗುಂಡಗುರ್ತಿ, ಡಾ.ಹಯ್ಯಾಳಪ್ಪ ಸುರಪೂರಕರ್, ಡಾ.ಗುರುದತ್ತ ಕುಲಕರ್ಣಿ, ಡಾ.ಜಗದೇವಪ್ಪ ಧರಣಿ, ಡಾ.ಕರಿಗೂಳೇಶ್ವರ, ಡಾ.ಗಾಂಧೀಜಿ ಮೋಳಕೆರೆ, ಡಾ.ಬಸವರಾಜ ಕೊಂಬಿನ್, ಡಾ.ಶ್ಯಾಮರಾವ ಶಿಡ್ಲೆ, ಡಾ.ಶಿವರಾಜ ಜಾಲಹಳ್ಳಿ, ಡಾ.ಚಂಪಾ, ಅರುಣಾ ತಂಬಾಕೆ, ಡಾ.ಮಾರುತಿ ಮಾರಪಳ್ಳಿ, ರಾಜು ಚಿಂಚೋಳಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.