ಕಲಬುರ್ಗಿ: ನಗರದ ಕುಸನೂರ ರಸ್ತೆಯ ಪೂಜಾ ಕಾಲೊನಿ ಬಡಾವಣೆಯಲ್ಲಿ ಇರುವ ಸಮಸ್ಯೆಗಳನ್ನು ಅರಿತುಕೊಂಡು, ಬಡವಣೆ ನಾಗರಿಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಪಾಲಿಕೆಯ ನೂತನ ಸದಸ್ಯ ಈರಣ್ಣ ಹೊನ್ನಳ್ಳಿ ಭರವಸೆ ನೀಡಿದರು.
ಇಲ್ಲಿನ ಪೂಜಾ ಕಾಲೊನಿಯಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಬಡಾವಣೆಯ ಅಧ್ಯಕ್ಷ ಎ.ಎಲ್ ಉಪಳಾಂವಕರ ಸತ್ಕರಿಸಿದರು.
ಹಣಮಂತ ರೆಡ್ಡಿ ಕಾರ್ಯಕ್ರಮ ನಿರ್ವಹಣೆ ಮಾಡಿದರು. ಡಾ. ಶ್ರೀಮಂತ ಹೋಳಕರ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಬಡಾವಣೆಯ ಹಿರಿಯರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.