ಕಲಬುರ್ಗಿ: ಕೋವಿಡ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ, ನಗರ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ನ್ಯಾಯಾಲಯಗಳ ಕಾರ್ಯಕಲಾಪಗಳನ್ನು ಆ. 8ರವರೆಗೂ ಸ್ಥಗಿತಗೊಳಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಆರ್.ಜೆ. ಸತೀಶ್ ಸಿಂಗ್ ಅವರು ತಿಳಿಸಿದ್ದಾರೆ.
ಈ ಅವಧಿಯಲ್ಲಿ ಯಾವುದೇ ನ್ಯಾಯಾಂಗ ಮತ್ತು ಇತರೆ ನ್ಯಾಯಾಂಗ ಹಾಗೂ ಆಡಳಿತಾತ್ಮಕ ಕೆಲಸ ಕಾರ್ಯಗಳನ್ನು ರದ್ದುಪಡಿಸಲಾಗಿದೆ. ಅದೇ ರೀತಿ ನ್ಯಾಯಾಲಯದಿಂದ ಜುಲೈ 31ರಂದು ಹೊರಡಿಸಿದ ಅಧಿಸೂಚನೆಯನ್ನು ಸಹ ರದ್ದುಪಡಿಲಾಗಿದೆ. ಈ ಅವಧಿಯಲ್ಲಿ ಕೇವಲ ತುರ್ತು ಕಲಾಪಗಳ ಪ್ರಕರಣಗಳನ್ನು ಇ-ಮೇಲ್ ಮಾತ್ರ ಸ್ವೀಕರಿಸಲಾಗುವುದು ಹಾಗೂ ವಿಡಿಯೊ ಸಂದರ್ಶನಗಳ ಮೂಲಕ ಆಲಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಕೋವಿಡ್ ಹಿನ್ನೆಲೆಯಲ್ಲಿ ಆ. 3ರಿಂದ 5 ರವರೆಗೆ ಎಲ್ಲ ನ್ಯಾಯಾಲಯಗಳ ಕಾರ್ಯಕಲಾಪಗಳನ್ನು ರದ್ದು ಮಾಡಲಾಗಿತ್ತು. ಈಗ ಅದನ್ನು ಆ. 8ರವರೆಗೂ ಮುಂದುವರಿಸಲಾಗಿದೆ.
ಜಿಲ್ಲಾ ನ್ಯಾಯಾಲಯದಲ್ಲಿ ಕೆಲಸ ಮಾಡುವ ನಾಲ್ವರು ಸಿಬ್ಬಂದಿಗೂ ಕೋವಿಡ್ ಅಂಟಿಕೊಂಡ ಕಾರಣ, ನ್ಯಾಯಾಲಯದ ಶೀಲ್ಡೌನ್ ಮುಂದುವರಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.