ಕಲಬುರಗಿ: ‘ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿವೆ. ಚಿತ್ರಮಂದಿರ, ಮಾಲ್ ಹಾಗೂ ಶಾಲಾ–ಕಾಲೇಜುಗಳನ್ನು ಬಂದ್ ಮಾಡಬೇಕು’ ಎಂದು ಕನ್ನಡ ಭೂಮಿ ಜಾಗೃತಿ ಸಮಿತಿ ರಾಜ್ಯ ಘಟಕದ ಅಧ್ಯಕ್ಷ ಲಿಂಗರಾಜ ಸಿರಗಾಪೂರ ಒತ್ತಾಯಿಸಿದ್ದಾರೆ.
ಈಗಾಗಲೇ ಕೋವಿಡ್ 3ನೇ ಅಲೆ ಪ್ರಾರಂಭವಾಗಿದೆ. ನೆರೆಯ ಮಹಾರಾಷ್ಟ್ರದಿಂದ ಜಿಲ್ಲೆಗೆ ನೂರಾರು ಜನ ಬರುತ್ತಿದ್ದಾರೆ. ಚಿತ್ರಮಂದಿರ ಹಾಗೂ ಮಾಲ್ಗಳಲ್ಲಿ ನಿಯಮಗಳು ಪಾಲನೆಯಾಗುತ್ತಿಲ್ಲ. ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಆದ್ದರಿಂದ ಚಿತ್ರಮಂದಿರ, ಮಾಲ್ ಹಾಗೂ ಶಾಲಾ–ಕಾಲೇಜುಗಳನ್ನು ಬಂದ್ ಮಾಡಬೇಕು ಎಂದು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.