ADVERTISEMENT

ಕಲಬುರ್ಗಿ: ಕೋವಿಡ್ ಗುಣಮುಖ ಸಿಬ್ಬಂದಿಗೆ ನ್ಯಾಯಮೂರ್ತಿಗಳಿಂದ ಸನ್ಮಾನ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2020, 8:49 IST
Last Updated 5 ಆಗಸ್ಟ್ 2020, 8:49 IST
ಕರ್ನಾಟಕ ಹೈಕೋರ್ಟ್ ಕಲಬುರ್ಗಿ ಪೀಠದ ಮಹಿಳಾ ಸಿಬ್ಬಂದಿಯೊಬ್ಬರಿಗೆ ಹೈಕೋರ್ಟ್ ನ ಹಿರಿಯ  ನ್ಯಾಯಮೂರ್ತಿ ಬಿ.ಎ.ಪಾಟೀಲ್ ಅವರು ಹೂ ನೀಡಿ ಗೌರವಿಸಿದರು.
ಕರ್ನಾಟಕ ಹೈಕೋರ್ಟ್ ಕಲಬುರ್ಗಿ ಪೀಠದ ಮಹಿಳಾ ಸಿಬ್ಬಂದಿಯೊಬ್ಬರಿಗೆ ಹೈಕೋರ್ಟ್ ನ ಹಿರಿಯ ನ್ಯಾಯಮೂರ್ತಿ ಬಿ.ಎ.ಪಾಟೀಲ್ ಅವರು ಹೂ ನೀಡಿ ಗೌರವಿಸಿದರು.   

ಕಲಬುರ್ಗಿ: ಕೋವಿಡ್ -19 ಸೋಂಕಿಗೊಳಗಾಗಿ ಕಲಬುರ್ಗಿ ಬುದ್ಧವಿಹಾರ ಕ್ವಾರಂಟೈನ್ ಕೇಂದ್ರದಲ್ಲಿ ಚಿಕಿತ್ಸೆ ಪಡೆದು ಗುಣಮುಖರಾದ ಕರ್ನಾಟಕ ಹೈಕೋರ್ಟ್ ಕಲಬುರ್ಗಿ ಪೀಠದ ಮಹಿಳಾ ಸಿಬ್ಬಂದಿಯೊಬ್ಬರಿಗೆ ಹೈಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ಬಿ.ಎ.ಪಾಟೀಲ್ ಅವರು ಹೂ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ನ್ಯಾಯಮೂರ್ತಿಗಳು, ನೀವು ನಮ್ಮೆಲ್ಲರ ಕುಟುಂಬದ ಸದಸ್ಯರಿದ್ದಂತೆ, ಯಾವುದೇ ಅಂಜಿಕೆಯಿಲ್ಲದಂತೆ ಕರ್ತವ್ಯ ನಿರ್ವಹಿಸುವಂತೆ ಧೈರ್ಯ ತುಂಬಿದರು.
ಎಲ್ಲರೂ ಮಾಸ್ಕ್, ಸ್ಯಾನಿಟೈಸರ್ ಮುಂತಾದವುಗಳ ಬಳಸುವ ಮೂಲಕ ಸುರಕ್ಷತಾ ಕ್ರಮ ಅನುಸರಿಸಬೇಕು ಎಂದು ಕರೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT