ADVERTISEMENT

ಅಪಘಾತ: ಕೆಎಸ್‌ಆರ್‌ಪಿ ಹೆಡ್‌ ಕಾನ್‌ಸ್ಟೆಬಲ್‌ ಸಾವು

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2019, 20:25 IST
Last Updated 16 ಅಕ್ಟೋಬರ್ 2019, 20:25 IST

ಕಲಬುರ್ಗಿ: ನಗರದ ಹೊರವಲಯದ ಜಮಗಾ ಕ್ರಾಸ್‌ ಬಳಿ ಬುಧವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಜಿಲ್ಲೆಯ ಕೆಎಸ್‌ಆರ್‌ಪಿ ಹೆಡ್‌ ಕಾನ್‌ಸ್ಟೆಬಲ್‌, ಬೆಳಮಗಿ ಗ್ರಾಮದ ಸುಬ್ಬಣ್ಣ ಸಂಗಣ್ಣ (48) ಬುಧವಾರ ಮೃತಪಟ್ಟರು.

ಬೆಳಮಗಿ ಗ್ರಾಮದಿಂದ ಕರ್ತವ್ಯಕ್ಕೆ ಹಾಜರಾಗಲು ನಗರಕ್ಕೆ ಬೈಕ್‌ನಲ್ಲಿ ಬರುತ್ತಿದ್ದ ಸುಬ್ಬಣ್ಣ ಅವರಿಗೆ ಎದುರಿನಿಂದ ಬಂದ ಬೈಕ್‌ ಸವಾರ ಡಿಕ್ಕಿ ಹೊಡೆಸಿದ. ಬೈಕ್‌ ಸವಾರನಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸಂಚಾರ ಠಾಣೆ ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT