ADVERTISEMENT

ಕಲಬುರ್ಗಿ: ನೇಣಿಗೆ ಶರಣಾದ ಎಎಸ್‌ಐ

​ಪ್ರಜಾವಾಣಿ ವಾರ್ತೆ
Published 25 ಜುಲೈ 2021, 4:36 IST
Last Updated 25 ಜುಲೈ 2021, 4:36 IST
ಜಗನ್ನಾಥ
ಜಗನ್ನಾಥ   

ಕಲಬುರ್ಗಿ: ಇಲ್ಲಿನ ಸ್ಟೇಷನ್‌ ಬಜಾರ್‌ ಠಾಣೆಯ ಎಎಸ್‌ಐ ಜಗನ್ನಾಥ (54) ಅವರು ಶುಕ್ರವಾರ ರಾತ್ರಿ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.

ಕಮಲಾಪುರ ತಾಲ್ಲೂಕಿನ ಬಾಚನಾಳ ಗ್ರಾಮದವರಾದ ಜಗನ್ನಾಥ ಅವರು, ನಗರದಲ್ಲಿರುವ ಪೊಲೀಸ್‌ ವಸತಿ ವಸತಿಗೃಹದಲ್ಲಿ ವಾಸವಾಗಿದ್ದರು. ಮನೆಯಲ್ಲಿ ಎಲ್ಲರೂ ಮಲಗಿದ ವೇಳೆ ತಮ್ಮ ಕೋಣೆಯಲ್ಲಿ ನೇಣು ಹಾಕಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ಸ್ಟೇಷನ್ ಬಜಾರ್‌ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ತಿಳಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.