ಕಲಬುರ್ಗಿ: ಚಲಿಸುತ್ತಿದ್ದ ಟೆರೆನೊ ನಿಶಾನ್ ವಾಹನಕ್ಕೆ ಸ್ಕಾರ್ಪಿಯೊ ವಾಹನ ಡಿಕ್ಕಿ ಹೊಡೆಸಿ ಜೇವರ್ಗಿ ತಾಲ್ಲೂಕಿನ ಮಯೂರ ಗ್ರಾಮದ ಶಿವಲಿಂಗ ಎಂಬುವವರನ್ನು ಕೊಲೆ ಮಾಡಲಾಗಿದೆ.
ಕಲಬುರ್ಗಿ ಹೊರವಲಯದ ಶರಣಸಿರಸಗಿ ಗ್ರಾಮದ ಬಳಿಯ ರಸ್ತೆಯಲ್ಲಿ ಈ ಕೊಲೆ ನಡೆದಿದ್ದು, ಹಳೆಯ ವೈಷಮ್ಯವೇ ಕಾರಣ ಎನ್ನಲಾಗಿದೆ.
ಮೊದಲು ವಾಹನವನ್ನು ಬೆನ್ನಟ್ಟಿಕೊಂಡು ಹೋದ ದುಷ್ಕರ್ಮಿಗಳು ನಂತರ ಅದಕ್ಕೆ ಡಿಕ್ಕಿ ಹೊಡೆಸಿದ್ದಾರೆ. ವಾಹನದಿಂದ ಶಿವಲಿಂಗ ಅವರನ್ನು ಎಳೆದು ಕೊಲೆ ಮಾಡಿದ್ದಾರೆ.
ಈ ಕುರಿತು ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.