ADVERTISEMENT

ಫರಹತಾಬಾದ್: ಯುವಕ ನೇಣಿಗೆ ಶರಣು

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2021, 3:41 IST
Last Updated 14 ಫೆಬ್ರುವರಿ 2021, 3:41 IST

ಫರಹತಾಬಾದ್ (ಕಲಬುರ್ಗಿ): ಸಮೀಪದ ಫರಹತಾಬಾದ್‌ ಗ್ರಾಮದಲ್ಲಿ ಶನಿವಾರ ಯುವಕ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಗರದ ಕಾಕಡೆ ಚೌಕ್‌ನ ನಿವಾಸಿ ಸುನೀಲಕುಮಾರ ಶ್ರೀಮಂತ (28) ಆತ್ಮಹತ್ಯೆ ಮಾಡಿಕೊಂಡವರು. ಈ ಯುವಕ ಮದ್ಯ ಕುಡಿದ ಅಮಲಿನಲ್ಲಿ ಮನೆ ಬಿಟ್ಟು ಹೋಗಿದ್ದ. ಮೂರು ದಿನಗಳ ನಂತರ ಫರಹಾತಾಬಾದ್‌ ಬಳಿಯ ಹೊಲವೊಂದರಲ್ಲಿ ಮರಕ್ಕೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದೆ. ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಅವರು ‘ಡೆತ್‌ನೋಟ್‌’ ಬರೆದಿಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಘಟನೆಗೆ ನಿಖರ ಕಾರಣ ಗೊತ್ತಾಗಿಲ್ಲ. ಫರಹತಾಬಾದ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.