ಸಾವು
ಪ್ರಾತಿನಿಧಿಕ ಚಿತ್ರ
ಕಲಬುರಗಿ: ನಿರಂತರ ಮಳೆಯಿಂದ ಹೊಲಗಳಲ್ಲಿ ಟ್ರ್ಯಾಕ್ಟರ್ಗೆ ಬಾಡಿಗೆ ಸಿಗದಿದ್ದರಿಂದ ನೊಂದು ವ್ಯಕ್ತಿಯೊಬ್ಬರು ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಬಗೆಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಫರಹತಾಬಾದ್ ನಿವಾಸಿ ಮಹಾಂತೇಶ ಮಂದೇವಾಲ ಮೃತರು. ಈ ಕುರಿತು ಮೃತರ ಸಹೋದರ ನೀಡಿದ ದೂರಿನನ್ವಯ ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.
ಕಾರಿನ ಗಾಜು ಒಡೆದು ಕಳವು
ನಗರದ ಜಗತ್ ವೃತ್ತದ ಬಳಿ ನಿಲ್ಲಿಸಿದ್ದ ಕಾರಿನ ಹಿಂದಿನ ಗಾಜು ಒಡೆದ ಕಳ್ಳರು ₹ 1.40 ಲಕ್ಷ ಮೌಲ್ಯದ ಎರಡು ಲ್ಯಾಪ್ಟಾಪ್, ₹ 20 ಸಾವಿರ ಮೌಲ್ಯದ ಏರ್ಬಡ್ಸ್ ಸೇರಿದಂತೆ ಒಟ್ಟು ₹ 1.73 ಲಕ್ಷ ಮೌಲ್ಯದ ವಸ್ತುಗಳನ್ನು ಕಳ್ಳರು ಕದ್ದು ಪರಾರಿಯಾಗಿದ್ದಾರೆ.
ಈ ಕುರಿತು ಮಾಬುಸಾಬ್ ನದಾಫ ನೀಡಿರುವ ದೂರಿನನ್ವಯ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.